ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಭ್ರಷ್ಟಚಾರವಿಲ್ಲದೆ ಸುಭದ್ರ ಆಡಳಿತ ನೀಡುವುದರ ಜೊತೆಗೆ ಬಡವರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಲೋಕ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ಮಾತುಗಳನ್ನಾಡಿದರು.
ನಗರದ ಒಕ್ಕಲಿಗರ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಜನಸೇವಕನಾಗಿದ್ದು, ಜನಸೇವೆಗಾಗಿ ಆಸ್ಪತ್ರೆ, ವಿದ್ಯಾಮಂದಿರಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನ ಜನರಿಗೆ ಒದಗಿಸಿದ್ದಾರೆ. ರಕ್ಷಾ ರಾಮಯ್ಯ ದೂರ ದೃಷ್ಟಿಯುಳ್ಳ ಉತ್ತಮ ಪ್ರತಿಭಾನ್ವಿತ ನಾಯಕ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರಕಾರ ಯಾವುದೇ ಜನಪರ ಯೋಜನೆಗಳನ್ನು ನೀಡಿಲ್ಲ ,ಕೋವಿಡ್ ಸಮಯದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ರ್ತೀಮಾನಗಳು ಜನ ಸಾಮನ್ಯರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿಗೆ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೋಬ್ಯಾಕ್ ಅಭಿಯಾನವನ್ನು ಸ್ವಂತ ಬಿಜೆಪಿ ಪಕ್ಷದ ಕಾರ್ಯಕರ್ತರೆ ಕೈಗೊಂಡಿದ್ದಾರೆ. ಜತೆಗೆ ಕೋವಿಡ್ ಸಮಯದ ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ಯರು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯನ್ನು ಮುಂದಿಟ್ಟು ಮತ ಕೇಳಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಸೇರಿದಂತೆ ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…