ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಚಿಂತನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಭ್ರಷ್ಟಚಾರವಿಲ್ಲದೆ ಸುಭದ್ರ ಆಡಳಿತ ನೀಡುವುದರ ಜೊತೆಗೆ ಬಡವರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಲೋಕ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ಮಾತುಗಳನ್ನಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಜನಸೇವಕನಾಗಿದ್ದು, ಜನಸೇವೆಗಾಗಿ ಆಸ್ಪತ್ರೆ, ವಿದ್ಯಾಮಂದಿರಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನ ಜನರಿಗೆ ಒದಗಿಸಿದ್ದಾರೆ. ರಕ್ಷಾ ರಾಮಯ್ಯ ದೂರ ದೃಷ್ಟಿಯುಳ್ಳ ಉತ್ತಮ ಪ್ರತಿಭಾನ್ವಿತ ನಾಯಕ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾರಾಮಯ್ಯ ಮಾತನಾಡಿ, ಲೋಕಸಭಾ ಚುನಾವಣೆಯು ಮಹತ್ವವಾದ ಚುನಾವಣೆಯಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುಸುತ್ತಿರುವ ಬಿಜೆಪಿ ಸರಕಾರ ಈ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ ಸಂವಿಧಾನವನ್ನು ಬದಲಾವಣೆಯನ್ನ ಮಾಡಲಾಗುವುದು ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹಿನ್ನಲೆಯಲ್ಲಿ ಬಿಜೆಪಿ ಸರಕಾರ ಸಂವಿಧಾನದ ಆಶಯಗಳಿಗೆ ಮಾರಕವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ  ಬಿಜೆಪಿ ಸರಕಾರ ಯಾವುದೇ ಜನಪರ ಯೋಜನೆಗಳನ್ನು ನೀಡಿಲ್ಲ ,ಕೋವಿಡ್ ಸಮಯದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ರ್ತೀಮಾನಗಳು ಜನ ಸಾಮನ್ಯರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿಗೆ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೋಬ್ಯಾಕ್ ಅಭಿಯಾನವನ್ನು ಸ್ವಂತ ಬಿಜೆಪಿ ಪಕ್ಷದ ಕಾರ್ಯಕರ್ತರೆ ಕೈಗೊಂಡಿದ್ದಾರೆ. ಜತೆಗೆ ಕೋವಿಡ್ ಸಮಯದ  ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ಯರು  ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯನ್ನು ಮುಂದಿಟ್ಟು ಮತ ಕೇಳಿ ಎಂದು  ಕಾರ್ಯಕರ್ತರಿಗೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಮೋದಿ ಸರಕಾರವು ಯಾವುದೇ ಜನಪರ ಕಾರ್ಯಕ್ರಮಗಳನ್ನು ತರದೇ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಸೇರಿದಂತೆ ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

9 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

18 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

22 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago