ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಚಿಂತನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಭ್ರಷ್ಟಚಾರವಿಲ್ಲದೆ ಸುಭದ್ರ ಆಡಳಿತ ನೀಡುವುದರ ಜೊತೆಗೆ ಬಡವರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಲೋಕ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ಮಾತುಗಳನ್ನಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಜನಸೇವಕನಾಗಿದ್ದು, ಜನಸೇವೆಗಾಗಿ ಆಸ್ಪತ್ರೆ, ವಿದ್ಯಾಮಂದಿರಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನ ಜನರಿಗೆ ಒದಗಿಸಿದ್ದಾರೆ. ರಕ್ಷಾ ರಾಮಯ್ಯ ದೂರ ದೃಷ್ಟಿಯುಳ್ಳ ಉತ್ತಮ ಪ್ರತಿಭಾನ್ವಿತ ನಾಯಕ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾರಾಮಯ್ಯ ಮಾತನಾಡಿ, ಲೋಕಸಭಾ ಚುನಾವಣೆಯು ಮಹತ್ವವಾದ ಚುನಾವಣೆಯಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುಸುತ್ತಿರುವ ಬಿಜೆಪಿ ಸರಕಾರ ಈ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ ಸಂವಿಧಾನವನ್ನು ಬದಲಾವಣೆಯನ್ನ ಮಾಡಲಾಗುವುದು ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹಿನ್ನಲೆಯಲ್ಲಿ ಬಿಜೆಪಿ ಸರಕಾರ ಸಂವಿಧಾನದ ಆಶಯಗಳಿಗೆ ಮಾರಕವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ  ಬಿಜೆಪಿ ಸರಕಾರ ಯಾವುದೇ ಜನಪರ ಯೋಜನೆಗಳನ್ನು ನೀಡಿಲ್ಲ ,ಕೋವಿಡ್ ಸಮಯದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ರ್ತೀಮಾನಗಳು ಜನ ಸಾಮನ್ಯರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿಗೆ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೋಬ್ಯಾಕ್ ಅಭಿಯಾನವನ್ನು ಸ್ವಂತ ಬಿಜೆಪಿ ಪಕ್ಷದ ಕಾರ್ಯಕರ್ತರೆ ಕೈಗೊಂಡಿದ್ದಾರೆ. ಜತೆಗೆ ಕೋವಿಡ್ ಸಮಯದ  ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ಯರು  ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯನ್ನು ಮುಂದಿಟ್ಟು ಮತ ಕೇಳಿ ಎಂದು  ಕಾರ್ಯಕರ್ತರಿಗೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಮೋದಿ ಸರಕಾರವು ಯಾವುದೇ ಜನಪರ ಕಾರ್ಯಕ್ರಮಗಳನ್ನು ತರದೇ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಸೇರಿದಂತೆ ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago