ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್: ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.

ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.

ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ಧೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.

ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.

ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ವೆಂಕಟರಮಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Ramesh Babu

Journalist

Recent Posts

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

4 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

4 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

15 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

22 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

23 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

1 day ago