ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್: ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.

ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.

ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ಧೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.

ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.

ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ವೆಂಕಟರಮಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

8 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

9 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

9 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

15 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

15 hours ago