ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್: ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.

ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.

ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ಧೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.

ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.

ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ವೆಂಕಟರಮಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago