ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್: ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.

ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.

ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ಧೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.

ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.

ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ವೆಂಕಟರಮಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago