ನಮ್ಮ ಸಂವಿಧಾನವು ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ. ಆದ್ದರಿಂದ ನಮ್ಮ ದೇಶದ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ್, ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ತೂಬಗೆರೆ ಹೋಬಳಿ ಘಟಕದ ಅಧ್ಯಕ್ಷ ಟಿ.ಆರ್.ಕುಮಾರ್, ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಮುನಿರಾಜು, ಷಪೀರ್, ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ರೇಣುಕಾರಾಧ್ಯ, ಅನಿಲ್ ಗುಪ್ತಾ, ಸಾಧಿಕ್, ನರೇಂದ್ರಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…