ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಸಂವಿಧಾನ ಪಾತ್ರ ದೊಡ್ಡದು- ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್

ನಮ್ಮ ಸಂವಿಧಾನವು ದೇಶದ ಸಮಗ್ರ ಅಭಿವೃದ್ಧಿಯಲ್ಲಿ  ಮಹತ್ವದ ಪಾತ್ರ ವಹಿಸಿದೆ. ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು  ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ. ಆದ್ದರಿಂದ ನಮ್ಮ ದೇಶದ  ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು ಎಂದರು.‌

ಕಿರುತೆರೆ ಬಾಲನಟಿ ಮತ್ತು ವಿದ್ಯಾರ್ಥಿನಿ ಗಮನಗೌಡ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ‌    ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದಾರೆ.  ಡಾ.ಬಿ‌.ಆರ್.ಅಂಬೇಡ್ಕರ್ ನೀಡಿರುವ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ವಿಚಾರಗಳು ಎಂದಿಗೂ ಪ್ರಸ್ತುತ ಎನಿಸುತ್ತದೆ. ಗಣರಾಜ್ಯೋತ್ಸವ ದಿನಾಚರಣೆ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ್, ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ತೂಬಗೆರೆ ಹೋಬಳಿ‌ ಘಟಕದ ಅಧ್ಯಕ್ಷ  ಟಿ.ಆರ್.ಕುಮಾರ್, ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಮುನಿರಾಜು, ಷಪೀರ್, ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ರೇಣುಕಾರಾಧ್ಯ, ಅನಿಲ್ ಗುಪ್ತಾ, ಸಾಧಿಕ್, ನರೇಂದ್ರಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

24 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago