ದೇಶದ ಸ್ವಾತಂತ್ರ್ಯ ಚಳವಳಿಗಳಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಭಾಗಿ- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ಭಾರತ ದೇಶದ ಸ್ವಾತಂತ್ರ್ಯ ಚಳುವಳಿಗಳಾದ ವಿದುರಾಶ್ವತ್ಥ ಹೋರಾಟ, ಶಿವಪುರ ಧ್ವಜ ಸತ್ಯಾಗ್ರಹ, ಬೆಳಗಾವಿ ಕಾಂಗ್ರೆಸ್ ಅಧಿವೇಶನ, ದಂಡಿ ಉಪ್ಪಿನ ಸತ್ಯಾಗ್ರಹ ಮುಂತಾದ ಹಲವಾರು ಮಹತ್ವದ ಹೋರಾಟಗಳಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ 78ನೇ ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಅನನ್ಯವಾಗಿದೆ ಎಂದುರು.

ದೊಡ್ಡಬಳ್ಳಾಪುರ ತಾಲ್ಲೂಕಿನ ‌ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರೆಂದರೆ ಮೈಸೂರು ಕಾಂಗ್ರೆಸ್ ಮೊದಲ  ಅಧ್ಯಕ್ಷರಾದ ಟಿ.ಸಿದ್ದಲಿಂಗಯ್ಯ, ಅಂತಾರಾಷ್ಟ್ರೀಯ ಚಿತ್ರ ಕಲಾವಿದ ರುಮಾಲೆ ಚನ್ನಬಸವಯ್ಯ, ಎಚ್.ಮುಗುವಾಳಪ್ಪ, ರುಮಾಲೆ ಭದ್ರಯ್ಯ,  ನಾ.ನಂಜುಂಡಯ್ಯ, ಡಿ.ದಾನಪ್ಪ, ಟಿ.ಸುನಂದಮ್ಮ, ರಾಮಯ್ಯ ಮೇಷ್ಟ್ರು ಮುಂತಾದ ನೂರಾರು ಸ್ವಾತಂತ್ರ್ಯ ಹೋರಾಟಗಾರರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿಯೂ  ಚಳುವಳಿಯಲ್ಲಿ ಭಾಗವಹಿಸಿದ್ದರು ಎಂದರು.

ದೊಡ್ಡಬಳ್ಳಾಪುರಕ್ಕೆ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಕಸ್ತೂರ ಬಾ ಮುಂತಾದವರು   ದೊಡ್ಡಬಳ್ಳಾಪುರಕ್ಕೆ ಬರಲು ಸ್ವಾತಂತ್ರ್ಯ ಹೋರಾಟಗಾರರಾದ ಟಿ. ಸಿದ್ದಲಿಂಗಯ್ಯ, ರುಮಾಲೆ ಚನ್ನಬಸಪ್ಪ, ಎಚ್.ಮುಗುವಾಳಪ್ಪ ಮುಂತಾದವರು ಕಾರಣರಾಗಿದ್ದಾರೆ. ಇವರುಗಳ ‌ಸ್ಫೂರ್ತಿಯಿಂದ  ದೊಡ್ಡಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಜನರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವಂತೆ ಮಾಡಿದರು ಎಂದು ಹೇಳಿದರು.

ಭಾರತ ಸ್ವಾತಂತ್ರ್ಯ ನಂತರವು ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಹಲವಾರು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರತರಾಗಿದ್ದರು. ರೈತರ ಮತ್ತು ದುರ್ಬಲರ  ಪರವಾದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.  ಪ್ರಾಮಾಣಿಕತೆ ಮತ್ತು ಆದರ್ಶದ ಮೌಲ್ಯಗಳೊಂದಿಗೆ ಜೀವಿಸಿದ್ದ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ತಾಲ್ಲೂಕಿನ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದರು. ಇವರ ಪ್ರೇರಣೆ ಮತ್ತು ಪ್ರಭಾವದಿಂದ ಹಲವು ಜನಪರ ಚಳುವಳಿಗಳಲ್ಲಿ  ಸಾವಿರಾರು ಜನರು ಭಾಗವಹಿಸುತ್ತಿದ್ದರು ಎಂದು ಇಂದಿಗೂ ಜನರು ಸ್ಮರಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿಗಳಾದ ಮುನಿರಾಜು, ನಾಗರತ್ನಮ್ಮ, ಷಫೀರ್, ಕಸಬಾ ಹೋಬಳಿ   ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ನಾಗರಾಜು, ತೂಬಗೆರೆ ಹೋಬಳಿ ಕೋಶಾಧ್ಯಕ್ಷ ಉದಯರಾಧ್ಯ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ,  ದರ್ಗಾಜೋಗಿಹಳ್ಳಿ ಮಲ್ಲೇಶ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗಾಜ್, ತಾಲ್ಲಾಕು ಅಧ್ಯಕ್ಷ ಶಶಿಧರ್,  ಯುವಘಟಕದ ದರ್ಶನ್, ಮಂಜುನಾಥ ಕಲಾ ಸಂಘದ ಚಿತ್ರಲಿಂಗಯ್ಯ, ಮಂಜುನಾಥ್, ನಾಗದಳ ನಟರಾಜು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

10 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

13 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

19 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago