Categories: ಬೆಳಗಾವಿ

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು- ರಾಯಣ್ಣ ದೇಶಭಕ್ತಿಗೆ ಮಾದರಿ- ಸಿಎಂ ಸಿದ್ದರಾಮಯ್ಯ

ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ?. ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ ಒಡೆದು ಆಳುವ ನೀತಿಯಿಂದ ಮಾತ್ರ. ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದು ಕೊಟ್ಟವರು ಕೂಡ ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ. ಶರಣಶ್ರೇಷ್ಠ ಬಸವಣ್ಣನವರು, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಕೂಡ ಜಾತಿ ತಾರತಮ್ಯ ಇಲ್ಲದ ಮನುಷ್ಯ ಪ್ರೇಮವನ್ನು ಸಾರಿದರು ಎಂದರು.

ರೈತರು, ಶಿಕ್ಷಕರು, ಸೈನಿಕರು ಈ ದೇಶವನ್ನು ಒಳಗಿನಿಂದ ಮತ್ತು ಹೊರಗಿನಿಂದ ಕಾಯುತ್ತಿರುವ ಸೈನಿಕರು. ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕ ಇದ್ದ ಹಾಗೆ. ರೈತರ ಏಳಿಗೆಗಾಗಿ ಹಸಿರು ಕ್ರಾಂತಿಯನ್ನು ಈ ದೇಶದಲ್ಲಿ ನಡೆಸಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15. ಇದೇ ದಿನ ದೇಶಕ್ಕೆ ಸ್ವಾತಂತ್ರ್ಯ ಬಂತು. ರಾಯಣ್ಣ ಹುತಾತ್ಮ ಆಗಿದ್ದು ಜನವರಿ 26. ಇದು ಗಣರಾಜ್ಯೋತ್ಸವ ದಿನ ಎಂಬುದು ಕಾಕತಾಳೀಯ ಎಂದರು.

ಮನುಷ್ಯ ದ್ವೇಷ ಹರಡಿ, ಮಸೀದಿ ದ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ ಎಂದು ತಿಳಿಸಿದರು.

ಸಂಗೊಳ್ಳಿರಾಯಣ್ಣನ ದೇಶಭಕ್ತಿ ಮತ್ತು ಹೋರಾಟದ ಛಲ ಹಾಗೂ ತ್ಯಾಗವನ್ನು ಶಾಶ್ವತಗೊಳಿಸುವ ಕಾರಣದಿಂದ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾಯಿತು. ಇದರಿಂದ ಇಡೀ ಕ್ಷೇತ್ರ ಹಲವು ದಿಕ್ಕುಗಳಿಂದ ಅಭಿವೃದ್ಧಿ ನಡೆಯುತ್ತಿದೆ. ಇಲ್ಲಿನ ಸೈನಿಕ ಶಾಲೆಗೆ ಶಂಕುಸ್ಥಾಪನೆ ನಾನೇ ನೆರವೇರಿಸಿದ್ದೆ. ಈಗ 250 ಮಕ್ಕಳು ಅಚ್ಚುಕಟ್ಟಾಗಿ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಶಾಸಕರಾದ ಮಹಂತೇಶ್ ಕೌಜಲಗಿ ಸಜ್ಜನ ಮತ್ತು ಮನುಷ್ಯ ಪ್ರೇಮದ ರಾಜಕಾರಣಿ. ಇಂಥವರು ಹೆಚ್ಚೆಚ್ಚು ರಾಜಕಾರಣಕ್ಕೆ ಬರಬೇಕು. ಮನುಷ್ಯ ದ್ವೇಷಿಗಳು ರಾಜಕಾರಣಕ್ಕೆ ಬರಬಾರದು. ಕೌಜಲಗಿ ಪ್ರತಿನಿಧಿಸುವ ಕ್ಷೇತ್ರ ಮತ್ತು ಸಂಗೊಳ್ಳಿಯ ಇಡೀ ಕ್ಷೇತ್ರ ಅಭಿವೃದ್ಧಿಗೆ ಅಗತ್ಯವಾದಷ್ಟು ಅನುದಾನವನ್ನು ನೀಡಲಾಗುವುದು ಎಂದರು.

ರಾಜ್ಯದಲ್ಲಿ ಕನ್ನಡಿಗರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಹೇಳಿದ್ದರು. ಐದಕ್ಕೆ ಐದೂ ಗ್ಯಾರಂಟಿಯನ್ನು ಸರ್ಕಾರ ಬಂದು 7 ತಿಂಗಳಲ್ಲೇ ಜಾರಿ ಆಗಿದೆ. ರಾಜ್ಯ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

8 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

12 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

15 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

16 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago