Categories: ಬೆಳಗಾವಿ

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು- ರಾಯಣ್ಣ ದೇಶಭಕ್ತಿಗೆ ಮಾದರಿ- ಸಿಎಂ ಸಿದ್ದರಾಮಯ್ಯ

ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ?. ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ ಒಡೆದು ಆಳುವ ನೀತಿಯಿಂದ ಮಾತ್ರ. ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದು ಕೊಟ್ಟವರು ಕೂಡ ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ. ಶರಣಶ್ರೇಷ್ಠ ಬಸವಣ್ಣನವರು, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಕೂಡ ಜಾತಿ ತಾರತಮ್ಯ ಇಲ್ಲದ ಮನುಷ್ಯ ಪ್ರೇಮವನ್ನು ಸಾರಿದರು ಎಂದರು.

ರೈತರು, ಶಿಕ್ಷಕರು, ಸೈನಿಕರು ಈ ದೇಶವನ್ನು ಒಳಗಿನಿಂದ ಮತ್ತು ಹೊರಗಿನಿಂದ ಕಾಯುತ್ತಿರುವ ಸೈನಿಕರು. ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕ ಇದ್ದ ಹಾಗೆ. ರೈತರ ಏಳಿಗೆಗಾಗಿ ಹಸಿರು ಕ್ರಾಂತಿಯನ್ನು ಈ ದೇಶದಲ್ಲಿ ನಡೆಸಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15. ಇದೇ ದಿನ ದೇಶಕ್ಕೆ ಸ್ವಾತಂತ್ರ್ಯ ಬಂತು. ರಾಯಣ್ಣ ಹುತಾತ್ಮ ಆಗಿದ್ದು ಜನವರಿ 26. ಇದು ಗಣರಾಜ್ಯೋತ್ಸವ ದಿನ ಎಂಬುದು ಕಾಕತಾಳೀಯ ಎಂದರು.

ಮನುಷ್ಯ ದ್ವೇಷ ಹರಡಿ, ಮಸೀದಿ ದ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ ಎಂದು ತಿಳಿಸಿದರು.

ಸಂಗೊಳ್ಳಿರಾಯಣ್ಣನ ದೇಶಭಕ್ತಿ ಮತ್ತು ಹೋರಾಟದ ಛಲ ಹಾಗೂ ತ್ಯಾಗವನ್ನು ಶಾಶ್ವತಗೊಳಿಸುವ ಕಾರಣದಿಂದ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾಯಿತು. ಇದರಿಂದ ಇಡೀ ಕ್ಷೇತ್ರ ಹಲವು ದಿಕ್ಕುಗಳಿಂದ ಅಭಿವೃದ್ಧಿ ನಡೆಯುತ್ತಿದೆ. ಇಲ್ಲಿನ ಸೈನಿಕ ಶಾಲೆಗೆ ಶಂಕುಸ್ಥಾಪನೆ ನಾನೇ ನೆರವೇರಿಸಿದ್ದೆ. ಈಗ 250 ಮಕ್ಕಳು ಅಚ್ಚುಕಟ್ಟಾಗಿ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಶಾಸಕರಾದ ಮಹಂತೇಶ್ ಕೌಜಲಗಿ ಸಜ್ಜನ ಮತ್ತು ಮನುಷ್ಯ ಪ್ರೇಮದ ರಾಜಕಾರಣಿ. ಇಂಥವರು ಹೆಚ್ಚೆಚ್ಚು ರಾಜಕಾರಣಕ್ಕೆ ಬರಬೇಕು. ಮನುಷ್ಯ ದ್ವೇಷಿಗಳು ರಾಜಕಾರಣಕ್ಕೆ ಬರಬಾರದು. ಕೌಜಲಗಿ ಪ್ರತಿನಿಧಿಸುವ ಕ್ಷೇತ್ರ ಮತ್ತು ಸಂಗೊಳ್ಳಿಯ ಇಡೀ ಕ್ಷೇತ್ರ ಅಭಿವೃದ್ಧಿಗೆ ಅಗತ್ಯವಾದಷ್ಟು ಅನುದಾನವನ್ನು ನೀಡಲಾಗುವುದು ಎಂದರು.

ರಾಜ್ಯದಲ್ಲಿ ಕನ್ನಡಿಗರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಹೇಳಿದ್ದರು. ಐದಕ್ಕೆ ಐದೂ ಗ್ಯಾರಂಟಿಯನ್ನು ಸರ್ಕಾರ ಬಂದು 7 ತಿಂಗಳಲ್ಲೇ ಜಾರಿ ಆಗಿದೆ. ರಾಜ್ಯ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

21 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago