Categories: ಬೆಳಗಾವಿ

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು- ರಾಯಣ್ಣ ದೇಶಭಕ್ತಿಗೆ ಮಾದರಿ- ಸಿಎಂ ಸಿದ್ದರಾಮಯ್ಯ

ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ?. ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ ಒಡೆದು ಆಳುವ ನೀತಿಯಿಂದ ಮಾತ್ರ. ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದು ಕೊಟ್ಟವರು ಕೂಡ ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ. ಶರಣಶ್ರೇಷ್ಠ ಬಸವಣ್ಣನವರು, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಕೂಡ ಜಾತಿ ತಾರತಮ್ಯ ಇಲ್ಲದ ಮನುಷ್ಯ ಪ್ರೇಮವನ್ನು ಸಾರಿದರು ಎಂದರು.

ರೈತರು, ಶಿಕ್ಷಕರು, ಸೈನಿಕರು ಈ ದೇಶವನ್ನು ಒಳಗಿನಿಂದ ಮತ್ತು ಹೊರಗಿನಿಂದ ಕಾಯುತ್ತಿರುವ ಸೈನಿಕರು. ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕ ಇದ್ದ ಹಾಗೆ. ರೈತರ ಏಳಿಗೆಗಾಗಿ ಹಸಿರು ಕ್ರಾಂತಿಯನ್ನು ಈ ದೇಶದಲ್ಲಿ ನಡೆಸಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15. ಇದೇ ದಿನ ದೇಶಕ್ಕೆ ಸ್ವಾತಂತ್ರ್ಯ ಬಂತು. ರಾಯಣ್ಣ ಹುತಾತ್ಮ ಆಗಿದ್ದು ಜನವರಿ 26. ಇದು ಗಣರಾಜ್ಯೋತ್ಸವ ದಿನ ಎಂಬುದು ಕಾಕತಾಳೀಯ ಎಂದರು.

ಮನುಷ್ಯ ದ್ವೇಷ ಹರಡಿ, ಮಸೀದಿ ದ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ ಎಂದು ತಿಳಿಸಿದರು.

ಸಂಗೊಳ್ಳಿರಾಯಣ್ಣನ ದೇಶಭಕ್ತಿ ಮತ್ತು ಹೋರಾಟದ ಛಲ ಹಾಗೂ ತ್ಯಾಗವನ್ನು ಶಾಶ್ವತಗೊಳಿಸುವ ಕಾರಣದಿಂದ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾಯಿತು. ಇದರಿಂದ ಇಡೀ ಕ್ಷೇತ್ರ ಹಲವು ದಿಕ್ಕುಗಳಿಂದ ಅಭಿವೃದ್ಧಿ ನಡೆಯುತ್ತಿದೆ. ಇಲ್ಲಿನ ಸೈನಿಕ ಶಾಲೆಗೆ ಶಂಕುಸ್ಥಾಪನೆ ನಾನೇ ನೆರವೇರಿಸಿದ್ದೆ. ಈಗ 250 ಮಕ್ಕಳು ಅಚ್ಚುಕಟ್ಟಾಗಿ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಶಾಸಕರಾದ ಮಹಂತೇಶ್ ಕೌಜಲಗಿ ಸಜ್ಜನ ಮತ್ತು ಮನುಷ್ಯ ಪ್ರೇಮದ ರಾಜಕಾರಣಿ. ಇಂಥವರು ಹೆಚ್ಚೆಚ್ಚು ರಾಜಕಾರಣಕ್ಕೆ ಬರಬೇಕು. ಮನುಷ್ಯ ದ್ವೇಷಿಗಳು ರಾಜಕಾರಣಕ್ಕೆ ಬರಬಾರದು. ಕೌಜಲಗಿ ಪ್ರತಿನಿಧಿಸುವ ಕ್ಷೇತ್ರ ಮತ್ತು ಸಂಗೊಳ್ಳಿಯ ಇಡೀ ಕ್ಷೇತ್ರ ಅಭಿವೃದ್ಧಿಗೆ ಅಗತ್ಯವಾದಷ್ಟು ಅನುದಾನವನ್ನು ನೀಡಲಾಗುವುದು ಎಂದರು.

ರಾಜ್ಯದಲ್ಲಿ ಕನ್ನಡಿಗರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಹೇಳಿದ್ದರು. ಐದಕ್ಕೆ ಐದೂ ಗ್ಯಾರಂಟಿಯನ್ನು ಸರ್ಕಾರ ಬಂದು 7 ತಿಂಗಳಲ್ಲೇ ಜಾರಿ ಆಗಿದೆ. ರಾಜ್ಯ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago