ದೇಶ ಕಾಯುವ ಸೈನಿಕರ ಸೇವೆ ಅಪಾರ- ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿಕೆ

ದೇಶ ಕಾಯುವ ಸೈನಿಕರ ಸೇವೆ ಅಪಾರ. ಸೈನಿಕರ ತ್ಯಾಗ ಬಲಿದಾನಗಳು ನಿಜಕ್ಕೂ ಅಮೂಲ್ಯವಾದದ್ದು ಎಂದು‌ ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿದರು.

ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆದ ಪುಲ್ವಾಮ ದಾಳಿ ಹುತಾತ್ಮರ ಸಂಸ್ಮರಣಾ ದಿನದಂದು ಹುತಾತ್ಮರಾದ ಸೈನಿಕರಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.

ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸಬೇಕು ಎಂದರು.

ಪ್ರತಿ ಪ್ರಾಂಶುಪಾಲ R. N. ಪಂಚಾಕ್ಷರಯ್ಯ ಮಾತನಾಡಿ, ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು ಎಂದರು.

ಈ ವೇಳೆ ಸಂಸ್ಥೆಯ ನಿರ್ದೇಶಕ ಕೃಷ್ಣಮೂರ್ತಿ, ಎನ್ ಸಿಸಿ ಅಧಿಕಾರಿ Lt. ಪ್ರವೀಣ್, ಎನ್ ಸಿಸಿ ಕ್ಯಾಡೆಟ್ಸ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

36 minutes ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

22 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago