ದೇಶ ಕಾಯುವ ಸೈನಿಕರ ಸೇವೆ ಅಪಾರ. ಸೈನಿಕರ ತ್ಯಾಗ ಬಲಿದಾನಗಳು ನಿಜಕ್ಕೂ ಅಮೂಲ್ಯವಾದದ್ದು ಎಂದು ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆದ ಪುಲ್ವಾಮ ದಾಳಿ ಹುತಾತ್ಮರ ಸಂಸ್ಮರಣಾ ದಿನದಂದು ಹುತಾತ್ಮರಾದ ಸೈನಿಕರಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.
ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸಬೇಕು ಎಂದರು.
ಪ್ರತಿ ಪ್ರಾಂಶುಪಾಲ R. N. ಪಂಚಾಕ್ಷರಯ್ಯ ಮಾತನಾಡಿ, ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು ಎಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಕೃಷ್ಣಮೂರ್ತಿ, ಎನ್ ಸಿಸಿ ಅಧಿಕಾರಿ Lt. ಪ್ರವೀಣ್, ಎನ್ ಸಿಸಿ ಕ್ಯಾಡೆಟ್ಸ್ ಸೇರಿದಂತೆ ಇತರರು ಇದ್ದರು.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…