ದೇಶ ಕಾಯುವ ಸೈನಿಕರ ಸೇವೆ ಅಪಾರ. ಸೈನಿಕರ ತ್ಯಾಗ ಬಲಿದಾನಗಳು ನಿಜಕ್ಕೂ ಅಮೂಲ್ಯವಾದದ್ದು ಎಂದು ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆದ ಪುಲ್ವಾಮ ದಾಳಿ ಹುತಾತ್ಮರ ಸಂಸ್ಮರಣಾ ದಿನದಂದು ಹುತಾತ್ಮರಾದ ಸೈನಿಕರಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.
ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸಬೇಕು ಎಂದರು.
ಪ್ರತಿ ಪ್ರಾಂಶುಪಾಲ R. N. ಪಂಚಾಕ್ಷರಯ್ಯ ಮಾತನಾಡಿ, ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು ಎಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಕೃಷ್ಣಮೂರ್ತಿ, ಎನ್ ಸಿಸಿ ಅಧಿಕಾರಿ Lt. ಪ್ರವೀಣ್, ಎನ್ ಸಿಸಿ ಕ್ಯಾಡೆಟ್ಸ್ ಸೇರಿದಂತೆ ಇತರರು ಇದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…