ದೇಹದ ಸಮಸ್ಯೆಗಳಲ್ಲಿ ಮಧುಮೇಹ ರೋಗವೂ ಒಂದು. ಜಾಗೃತಿ ಹಾಗೂ ಮಿತ ಆಹಾರ ದೈಹಿಕ ಶ್ರಮ ಹಾಗೂ ಸದೃಢ ಮನಸ್ಸನ್ನು ಹೊಂದಿದರೆ ಮಧುಮೇಹ ಖಂಡಿತ ನಮ್ಮ ಬಳಿ ಸುಳಿಯುವುದಿಲ್ಲ. ನಾವು ಎಷ್ಟು ಯಾಂತ್ರಿಕವಾಗಿ, ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಮಧುಮೇಹ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆದರೆ, ನಿಯಂತ್ರಿಸಬಹುದು ಎಂದು ಡಾ.ಹುಲಿಕಲ್ ನಟರಾಜ್ ಹೇಳಿದರು.
ನಗರದ ಲಯನ್ಸ್ ಕ್ಲಬ್ ಕಚೇರಿಯಲ್ಲಿ ನಡೆದ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 105 ಮಂದಿ ಮಧುಮೇಹ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ಲಯನ್ಸ್ ಕ್ಲಬ್ ನ ಜಿಲ್ಲಾ ಸದಸ್ಯ ವಿಜಯಕುಮಾರ್, ಲಯನ್ ರಾಜಶೇಖರ್, ನಾಗರತ್ನಮ್ಮ, ನಾಗರಾಜು, ಸಿ.ಎನ್. ರಾಜಶೇಖರ್, ಕವಿತಾ ರಾಜಶೇಖರ್, ಕೆ.ಪಿ.ಲಕ್ಷ್ಮೀ ನಾರಾಯಣ್, ರಮಾಕಾಂತ್, ಆರ್.ಎಸ್. ಮಂಜುನಾಥ್, ವೇಣುಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…