ದೇಹದ ಸಮಸ್ಯೆಗಳಲ್ಲಿ ಮಧುಮೇಹ ರೋಗವೂ ಒಂದು. ಜಾಗೃತಿ ಹಾಗೂ ಮಿತ ಆಹಾರ ದೈಹಿಕ ಶ್ರಮ ಹಾಗೂ ಸದೃಢ ಮನಸ್ಸನ್ನು ಹೊಂದಿದರೆ ಮಧುಮೇಹ ಖಂಡಿತ ನಮ್ಮ ಬಳಿ ಸುಳಿಯುವುದಿಲ್ಲ. ನಾವು ಎಷ್ಟು ಯಾಂತ್ರಿಕವಾಗಿ, ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಮಧುಮೇಹ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆದರೆ, ನಿಯಂತ್ರಿಸಬಹುದು ಎಂದು ಡಾ.ಹುಲಿಕಲ್ ನಟರಾಜ್ ಹೇಳಿದರು.
ನಗರದ ಲಯನ್ಸ್ ಕ್ಲಬ್ ಕಚೇರಿಯಲ್ಲಿ ನಡೆದ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 105 ಮಂದಿ ಮಧುಮೇಹ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ಲಯನ್ಸ್ ಕ್ಲಬ್ ನ ಜಿಲ್ಲಾ ಸದಸ್ಯ ವಿಜಯಕುಮಾರ್, ಲಯನ್ ರಾಜಶೇಖರ್, ನಾಗರತ್ನಮ್ಮ, ನಾಗರಾಜು, ಸಿ.ಎನ್. ರಾಜಶೇಖರ್, ಕವಿತಾ ರಾಜಶೇಖರ್, ಕೆ.ಪಿ.ಲಕ್ಷ್ಮೀ ನಾರಾಯಣ್, ರಮಾಕಾಂತ್, ಆರ್.ಎಸ್. ಮಂಜುನಾಥ್, ವೇಣುಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…