ದೈಹಿಕ‌ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಲು‌ ಯೋಗ ಅತಿಮುಖ್ಯ- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸದಾಶಿವ ರಾಮಚಂದ್ರಗೌಡ

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ಅವರು ಮಾತನಾಡಿದರು.

ಯೋಗವು ನಮ್ಮೆಲ್ಲರ ಜೀವನದಲ್ಲಿ ಅನುಷ್ಠಾನಗೊಂಡರೆ, ನಾವೆಲ್ಲರೂ ಶತಾಯುಷಿಗಳಾಗಿ ಬದುಕಲು ಸಾಧ್ಯವಿದೆ. ಇಂದು ಯುವಕರು ನಿರುತ್ಸಾಹಿಗಳಾಗಿ ಬದುಕುತ್ತಿದ್ದು, ಅವರನ್ನ ಉತ್ಸಾಹಶೀಲಾರನ್ನಾಗಿ ಮಾಡಲು ಯೋಗ ಬಹಳ ಮುಖ್ಯವಾಗಿದೆ. ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಯೋಗಭ್ಯಾಸ ಮಾಡುವುದನ್ನ ಅಳವಡಿಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ,  ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಯೋಗವನ್ನ ಪರಿಚಯಿಸಿ, ದೇಶದ ಪರಿಕಲ್ಪನೆಯನ್ನ ಸಾರುತ್ತಿರುವುದು ಹೆಮ್ಮೆಪಡುವ ಸಂಗತಿಯಾಗಿದೆ. ನಮ್ಮ ಅರೋಗ್ಯವನ್ನ ಸಶಕ್ತವಾಗಿಟ್ಟುಕೊಳ್ಳಲು ಯೋಗ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯೋಗಾಪಟು ಹಾಗೂ ವಿದ್ಯಾರ್ಥಿ ಚೇತನ್ ರಾಮ್ ಮಾರ್ಗದರ್ಶನದಲ್ಲಿ  ಯೋಗಭ್ಯಾಸ ನಡೆಸಲಾಯಿತು.

ಈ ವೇಳೆ ಉಪನ್ಯಾಸಕರಾದ ಸಿದ್ದರಾಮರಾಜು, ಪ್ರೊ. ನೀರಜಾ ದೇವಿ, ಡಾ.ಪ್ರಕಾಶ್ ಮಂಟೆದ, ರಾಜ್ ಕುಮಾರ್, ಮಂಜುನಾಥ್, ಕಾಲೇಜಿನ NSS, NCC ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

43 minutes ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

2 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

3 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

9 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

12 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

13 hours ago