ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಶೇ.90ರಷ್ಟು ಸ್ಥಳೀಯವಾಗಿ ಬಗೆಹರಿಸುವಂತಹ ಸಮಸ್ಯೆಗಳು ಬಂದಿವೆ. ಕೂಡಲೇ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಹಯೋಗದೊಂದಿಗೆ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗ್ರಾಮ ಪಂಚಾಯಿತಿ ಪಿಡಿಒ‌ ಮೇಲೆ ಹಲವು ಆರೋಪಗಳು ಬಂದಿವೆ. ಕೂಡಲೇ ಅವರು ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮತ್ತೆ ಜನರಿಂದ ದೂರುಗಳು ಬಂದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಸ್ಮಶಾನಗಳಿಗೆ ದಾರಿ, ರಸ್ತೆ ದುರಸ್ತಿ, ಹೊಸ ರಸ್ತೆ ಕಾಮಗಾರಿ, ಚರಂಡಿ ದುರಸ್ತಿ, ಪಡಿತರ ಕೇಂದ್ರ ಸ್ಥಾಪನೆ, ಆಟದ ಮೈದಾನಕ್ಕೆ ಜಾಗ ಮಂಜೂರಿಗೆ ಸಂಬಂಧಿಸಿದಂತೆ ಅಹವಾಲುಗಳು ಬಂದಿವೆ. ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಇತ್ಯರ್ಥಪಡಿಸುವುದಾಗಿ ತಿಳಿಸಿದರು.

ಆಶ್ರಯ ಯೋಜನೆ ಸೈಟ್ ಒಂದು ತಿಂಗಳೊಳಗೆ ಫಲಾನುಭವಿಗಳ ಪಟ್ಟಿ ತಯಾರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಮಂಜುನಾಥ್, ಉಪಾಧ್ಯಕ್ಷೆ ಸವಿತಾ ರವಿಕುಮಾರ್,  ಪಿಡಿಒ ಪ್ರಸನ್ನ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಕಾಶ್, ಮುನಿಕೃಷ್ಣಪ್ಪ ಸೇರಿದಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

29 minutes ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

13 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago