ಶೇ.90ರಷ್ಟು ಸ್ಥಳೀಯವಾಗಿ ಬಗೆಹರಿಸುವಂತಹ ಸಮಸ್ಯೆಗಳು ಬಂದಿವೆ. ಕೂಡಲೇ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಹಯೋಗದೊಂದಿಗೆ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಹಲವು ಆರೋಪಗಳು ಬಂದಿವೆ. ಕೂಡಲೇ ಅವರು ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮತ್ತೆ ಜನರಿಂದ ದೂರುಗಳು ಬಂದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಸ್ಮಶಾನಗಳಿಗೆ ದಾರಿ, ರಸ್ತೆ ದುರಸ್ತಿ, ಹೊಸ ರಸ್ತೆ ಕಾಮಗಾರಿ, ಚರಂಡಿ ದುರಸ್ತಿ, ಪಡಿತರ ಕೇಂದ್ರ ಸ್ಥಾಪನೆ, ಆಟದ ಮೈದಾನಕ್ಕೆ ಜಾಗ ಮಂಜೂರಿಗೆ ಸಂಬಂಧಿಸಿದಂತೆ ಅಹವಾಲುಗಳು ಬಂದಿವೆ. ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಇತ್ಯರ್ಥಪಡಿಸುವುದಾಗಿ ತಿಳಿಸಿದರು.
ಆಶ್ರಯ ಯೋಜನೆ ಸೈಟ್ ಒಂದು ತಿಂಗಳೊಳಗೆ ಫಲಾನುಭವಿಗಳ ಪಟ್ಟಿ ತಯಾರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಮಂಜುನಾಥ್, ಉಪಾಧ್ಯಕ್ಷೆ ಸವಿತಾ ರವಿಕುಮಾರ್, ಪಿಡಿಒ ಪ್ರಸನ್ನ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಕಾಶ್, ಮುನಿಕೃಷ್ಣಪ್ಪ ಸೇರಿದಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…