ಶೇ.90ರಷ್ಟು ಸ್ಥಳೀಯವಾಗಿ ಬಗೆಹರಿಸುವಂತಹ ಸಮಸ್ಯೆಗಳು ಬಂದಿವೆ. ಕೂಡಲೇ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಹಯೋಗದೊಂದಿಗೆ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಹಲವು ಆರೋಪಗಳು ಬಂದಿವೆ. ಕೂಡಲೇ ಅವರು ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮತ್ತೆ ಜನರಿಂದ ದೂರುಗಳು ಬಂದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಸ್ಮಶಾನಗಳಿಗೆ ದಾರಿ, ರಸ್ತೆ ದುರಸ್ತಿ, ಹೊಸ ರಸ್ತೆ ಕಾಮಗಾರಿ, ಚರಂಡಿ ದುರಸ್ತಿ, ಪಡಿತರ ಕೇಂದ್ರ ಸ್ಥಾಪನೆ, ಆಟದ ಮೈದಾನಕ್ಕೆ ಜಾಗ ಮಂಜೂರಿಗೆ ಸಂಬಂಧಿಸಿದಂತೆ ಅಹವಾಲುಗಳು ಬಂದಿವೆ. ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಇತ್ಯರ್ಥಪಡಿಸುವುದಾಗಿ ತಿಳಿಸಿದರು.
ಆಶ್ರಯ ಯೋಜನೆ ಸೈಟ್ ಒಂದು ತಿಂಗಳೊಳಗೆ ಫಲಾನುಭವಿಗಳ ಪಟ್ಟಿ ತಯಾರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಮಂಜುನಾಥ್, ಉಪಾಧ್ಯಕ್ಷೆ ಸವಿತಾ ರವಿಕುಮಾರ್, ಪಿಡಿಒ ಪ್ರಸನ್ನ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಕಾಶ್, ಮುನಿಕೃಷ್ಣಪ್ಪ ಸೇರಿದಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…