ದೊಡ್ಡತುಮಕೂರು ಪಂ ಗ್ರಾಮ‌ ಸಭೆ: ತ್ವರಿತವಾಗಿ ಕುಡಿಯುವ‌ ನೀರು‌‌ ಪೂರೈಸಲು ಶಾಸಕ ಸೂಚನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕಾಡನೂರು ಬಳಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ತ್ವರಿತವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡತುಮಕೂರು ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು, ಕೈಗಾರಿಕಾ ಹಾಗೂ ನಗರಸಭೆ ತ್ಯಾಜ್ಯ ನೀರಿನಿಂದ ಪಂಚಾಯಿತಿ ವ್ಯಾಪ್ತಿಯ ಕೆರೆಗಳು ಕಲುಷಿತವಾಗಿದ್ದು, ಕುಡಿಯುವ ನೀರಿಗಾಗಿ ತತ್ವಾರ ಎದುರಾಗಿದೆ ಇದನ್ನ ಮನಗಂಡ ಜಿಲ್ಲಾಡಳಿತ ಕಾಡನೂರು ಬಳಿ‌ ಹತ್ತು ಕೊಳವೆ ಬಾವಿಗಳನ್ನು ಕೊರೆಸಿದ್ದು, ಪೈಪ್ ಲೈನ್ ಕಾಮಗಾರಿ ಪೂರ್ಣವಾಗಿದೆ. ಟ್ಯಾಂಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ತ್ವರಿತವಾಗಿ ಕಾಮಗಾರಿ‌ ಮುಗಿಸಿ ಕುಡಿಯುವ ನೀರನ್ನು ಪೂರೈಸಬೇಕು, ಜೊತೆಗೆ, ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಅಡ್ಡಿ ಇರುವ ಸಮಸ್ಯೆಗಳನ್ನು ಬಗೆಹರಿಸಿ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು, ಅಧಿಕಾರಿಗಳ ನಿರ್ಲಕ್ಷ್ಯ ಕುರಿತು ಶಾಸಕರ ಗಮನ ಸೆಳೆದರು. ಈ ವೇಳೆ ಗ್ರಾಮ ಸಭೆಗೆ ಗೈರಾದ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.

ಗ್ರಾಮ ಸಭೆಯಲ್ಲಿ ಭಾಗವಹಿಸಬೇಕಾಗಿದ್ದ ವಿವಿಧ ಇಲಾಖೆಗಳ 25‌ ಅಧಿಕಾರಿಗಳ ಬದಲಿಗೆ 13‌ ಮಂದಿ ಮಾತ್ರ ಹಾಜರಿದ್ದರು.

ಈ ವೇಳೆ ಗ್ರಾ.ಪಂ‌ ಅಧ್ಯಕ್ಷೆ ಸರೋಜಾ ವಿ.ಮಂಜುನಾಥ್, ಗ್ರಾ ಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ಉಪಾಧ್ಯಕ್ಷೆ ಸವಿತಾ ವಿ.ರವಿಕುಮಾರ್, ಕಾಡನೂರು ಗ್ರಾ.ಪಂ ಅಧ್ಯಕ್ಷ ಮನು, ಮುಖಂಡರಾದ ಮಂಜುನಾಥ್, ನಾಗರಾಜ್ ಬಾಬು, ನರಸಿಂಹರಾಜು, ಶಿವಕುಮಾರ್, ನಾಗರಾಜ್, ಸದಸ್ಯರಾದ ಟಿ.ಪಿ.ಲೋಕೇಶ್, ಲಕ್ಷ್ಮಿದೇವಿ, ಟಿ.ಎನ್.ಚೈತ್ರ, ರಂಗಸ್ವಾಮಯ್ಯ, ಚೈತ್ರ ಎಂ.ಆರ್ , ಸಿ.ವೀರೇಗೌಡ, ಮಂಜುಳಾ, ಮುನಿರಾಜು ಎಂ, ಮರೀಗೌಡ, ವರಲಕ್ಷ್ಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

4 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

14 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

15 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

20 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

21 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago