ದೊಡ್ಡತುಮಕೂರು ಪಂ ಗ್ರಾಮ‌ ಸಭೆ: ತ್ವರಿತವಾಗಿ ಕುಡಿಯುವ‌ ನೀರು‌‌ ಪೂರೈಸಲು ಶಾಸಕ ಸೂಚನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕಾಡನೂರು ಬಳಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ತ್ವರಿತವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡತುಮಕೂರು ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು, ಕೈಗಾರಿಕಾ ಹಾಗೂ ನಗರಸಭೆ ತ್ಯಾಜ್ಯ ನೀರಿನಿಂದ ಪಂಚಾಯಿತಿ ವ್ಯಾಪ್ತಿಯ ಕೆರೆಗಳು ಕಲುಷಿತವಾಗಿದ್ದು, ಕುಡಿಯುವ ನೀರಿಗಾಗಿ ತತ್ವಾರ ಎದುರಾಗಿದೆ ಇದನ್ನ ಮನಗಂಡ ಜಿಲ್ಲಾಡಳಿತ ಕಾಡನೂರು ಬಳಿ‌ ಹತ್ತು ಕೊಳವೆ ಬಾವಿಗಳನ್ನು ಕೊರೆಸಿದ್ದು, ಪೈಪ್ ಲೈನ್ ಕಾಮಗಾರಿ ಪೂರ್ಣವಾಗಿದೆ. ಟ್ಯಾಂಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ತ್ವರಿತವಾಗಿ ಕಾಮಗಾರಿ‌ ಮುಗಿಸಿ ಕುಡಿಯುವ ನೀರನ್ನು ಪೂರೈಸಬೇಕು, ಜೊತೆಗೆ, ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಅಡ್ಡಿ ಇರುವ ಸಮಸ್ಯೆಗಳನ್ನು ಬಗೆಹರಿಸಿ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು, ಅಧಿಕಾರಿಗಳ ನಿರ್ಲಕ್ಷ್ಯ ಕುರಿತು ಶಾಸಕರ ಗಮನ ಸೆಳೆದರು. ಈ ವೇಳೆ ಗ್ರಾಮ ಸಭೆಗೆ ಗೈರಾದ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.

ಗ್ರಾಮ ಸಭೆಯಲ್ಲಿ ಭಾಗವಹಿಸಬೇಕಾಗಿದ್ದ ವಿವಿಧ ಇಲಾಖೆಗಳ 25‌ ಅಧಿಕಾರಿಗಳ ಬದಲಿಗೆ 13‌ ಮಂದಿ ಮಾತ್ರ ಹಾಜರಿದ್ದರು.

ಈ ವೇಳೆ ಗ್ರಾ.ಪಂ‌ ಅಧ್ಯಕ್ಷೆ ಸರೋಜಾ ವಿ.ಮಂಜುನಾಥ್, ಗ್ರಾ ಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ಉಪಾಧ್ಯಕ್ಷೆ ಸವಿತಾ ವಿ.ರವಿಕುಮಾರ್, ಕಾಡನೂರು ಗ್ರಾ.ಪಂ ಅಧ್ಯಕ್ಷ ಮನು, ಮುಖಂಡರಾದ ಮಂಜುನಾಥ್, ನಾಗರಾಜ್ ಬಾಬು, ನರಸಿಂಹರಾಜು, ಶಿವಕುಮಾರ್, ನಾಗರಾಜ್, ಸದಸ್ಯರಾದ ಟಿ.ಪಿ.ಲೋಕೇಶ್, ಲಕ್ಷ್ಮಿದೇವಿ, ಟಿ.ಎನ್.ಚೈತ್ರ, ರಂಗಸ್ವಾಮಯ್ಯ, ಚೈತ್ರ ಎಂ.ಆರ್ , ಸಿ.ವೀರೇಗೌಡ, ಮಂಜುಳಾ, ಮುನಿರಾಜು ಎಂ, ಮರೀಗೌಡ, ವರಲಕ್ಷ್ಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

10 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago