ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕಾಡನೂರು ಬಳಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ತ್ವರಿತವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೊಡ್ಡತುಮಕೂರು ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು, ಕೈಗಾರಿಕಾ ಹಾಗೂ ನಗರಸಭೆ ತ್ಯಾಜ್ಯ ನೀರಿನಿಂದ ಪಂಚಾಯಿತಿ ವ್ಯಾಪ್ತಿಯ ಕೆರೆಗಳು ಕಲುಷಿತವಾಗಿದ್ದು, ಕುಡಿಯುವ ನೀರಿಗಾಗಿ ತತ್ವಾರ ಎದುರಾಗಿದೆ ಇದನ್ನ ಮನಗಂಡ ಜಿಲ್ಲಾಡಳಿತ ಕಾಡನೂರು ಬಳಿ ಹತ್ತು ಕೊಳವೆ ಬಾವಿಗಳನ್ನು ಕೊರೆಸಿದ್ದು, ಪೈಪ್ ಲೈನ್ ಕಾಮಗಾರಿ ಪೂರ್ಣವಾಗಿದೆ. ಟ್ಯಾಂಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ತ್ವರಿತವಾಗಿ ಕಾಮಗಾರಿ ಮುಗಿಸಿ ಕುಡಿಯುವ ನೀರನ್ನು ಪೂರೈಸಬೇಕು, ಜೊತೆಗೆ, ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಅಡ್ಡಿ ಇರುವ ಸಮಸ್ಯೆಗಳನ್ನು ಬಗೆಹರಿಸಿ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು, ಅಧಿಕಾರಿಗಳ ನಿರ್ಲಕ್ಷ್ಯ ಕುರಿತು ಶಾಸಕರ ಗಮನ ಸೆಳೆದರು. ಈ ವೇಳೆ ಗ್ರಾಮ ಸಭೆಗೆ ಗೈರಾದ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.
ಗ್ರಾಮ ಸಭೆಯಲ್ಲಿ ಭಾಗವಹಿಸಬೇಕಾಗಿದ್ದ ವಿವಿಧ ಇಲಾಖೆಗಳ 25 ಅಧಿಕಾರಿಗಳ ಬದಲಿಗೆ 13 ಮಂದಿ ಮಾತ್ರ ಹಾಜರಿದ್ದರು.
ಈ ವೇಳೆ ಗ್ರಾ.ಪಂ ಅಧ್ಯಕ್ಷೆ ಸರೋಜಾ ವಿ.ಮಂಜುನಾಥ್, ಗ್ರಾ ಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ಉಪಾಧ್ಯಕ್ಷೆ ಸವಿತಾ ವಿ.ರವಿಕುಮಾರ್, ಕಾಡನೂರು ಗ್ರಾ.ಪಂ ಅಧ್ಯಕ್ಷ ಮನು, ಮುಖಂಡರಾದ ಮಂಜುನಾಥ್, ನಾಗರಾಜ್ ಬಾಬು, ನರಸಿಂಹರಾಜು, ಶಿವಕುಮಾರ್, ನಾಗರಾಜ್, ಸದಸ್ಯರಾದ ಟಿ.ಪಿ.ಲೋಕೇಶ್, ಲಕ್ಷ್ಮಿದೇವಿ, ಟಿ.ಎನ್.ಚೈತ್ರ, ರಂಗಸ್ವಾಮಯ್ಯ, ಚೈತ್ರ ಎಂ.ಆರ್ , ಸಿ.ವೀರೇಗೌಡ, ಮಂಜುಳಾ, ಮುನಿರಾಜು ಎಂ, ಮರೀಗೌಡ, ವರಲಕ್ಷ್ಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…