ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 hour ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

3 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

5 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

5 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

5 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

7 hours ago