ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಗ್ರಾಮಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಗ್ರಾಮ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.
ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…