ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

3 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

13 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

24 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago