ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

5 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

8 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago