ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಗ್ರಾಮಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಗ್ರಾಮ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.
ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…