ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

36 minutes ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

1 day ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

1 day ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

2 days ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

2 days ago