ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

60 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

8 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago