ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾ. ಪಂ ಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ: ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿರೋ ಅಧಿಕಾರಿಗಳು

ಇಂದು ಒಂದೇ ದಿನ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿದಂತೆ ವಿವಿಧ‌ ಗ್ರಾಮಪಂಚಾಯಿತಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಗ್ರಾಮ‌ಪಂಚಾಯಿತಿಗಳ ದುರಾಡಳಿತ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಗ್ರಾಮ‌ ಪಂಚಾಯಿತಿಗಳಿಗೆ ಖುದ್ದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿ ಮತ್ತೊಂದು ಪಂಚಾಯಿತಿಗೆ ತೆರಳುತ್ತಿದ್ದಾಗ ಶಾಲಾ ಬಸ್ಸಿನಲ್ಲಿ ಮಕ್ಕಳನ್ನು ಕಂಡು ಕೂಡಲೇ ಶಾಲಾ ಬಸ್ ನಿಲ್ಲಿಸಿ ಕೆಲಕಾಲ ಮಕ್ಕಳ ಬಳಿ ಸಂವಾದ ನಡೆಸಿದರು.

ನಾನು ಉಪಲೋಕಾಯುಕ್ತ ಬಿ.ವೀರಪ್ಪ ಎಂದು ಮಕ್ಕಳಿಗೆ ಪರಿಚಯ ಮಾಡಿಕೊಂಡ ಅವರು, ಚೆನ್ನಾಗಿ ಓದಿ ತಂದೆ-ತಾಯಿ, ಶಿಕ್ಷಕರು, ಊರು, ರಾಜ್ಯ, ದೇಶಕ್ಕೆ ಒಳ್ಳೆ ಹೆಸರನ್ನು ತಂದುಕೊಡಬೇಕು. ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್‌‌‌ ಸೇರಿದಂತೆ ಇತರೆ ಮಹನೀಯರ ಮಾರ್ಗದಲ್ಲಿ ಸಾಗುವಂತೆ ಸಲಹೆ ನೀಡಿದರು. ಅನ್ಯಾಯ, ಭ್ರಷ್ಟಾಚಾರ, ಅಪರಾಧಗಳಿಂದ ದೂರ ಇರುವಂತೆ ಸೂಚನೆ ನೀಡಿದರು.

ಯಾವುದೇ ರೀತಿ ಸಮಸ್ಯೆ ಆದಲ್ಲಿ ನಮಗೆ ದೂರು ನೀಡುವಂತೆ ಉಪಲೋಕಾಯುಕ್ತ ಕಚೇರಿ ಮೊಬೈಲ್‌ ಸಂಖ್ಯೆ‌ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡತುಮಕೂರು ಗ್ರಾಮಪಂಚಾಯಿತಿಯಲ್ಲಿ ಕನ್ಸ್ಟಕ್ಷನ್ ಗೆ ಸಂಬಂಧಪಟ್ಟ ಲೆಟರ್ ಹೆಡ್ ಗಳು ಖಾಲಿ ಖಾಲಿ ಆಗಿವೆ. ಅನುಗ್ರಹ ಕೆಮಿಕಲ್ ಫ್ಯಾಕ್ಟರಿಯಿಂದ ಮಳೆಗಾಲದಲ್ಲಿ ರೈತರಿಗೆ ಭಾರಿ ತೊಂದರೆ ಆಗುತ್ತಿರುವ ದೂರು ಕೇಳಿಬಂದಿದೆ. ಯಾರೂ ಕೂಡ ಹಣ ಕೊಟ್ಟು ವೋಟ್ ಹಾಕಬಾರದು, ಒಂದು ವೇಳೆ ತಮ್ಮ ವೋಟ್ ನ್ನು ಹಣಕ್ಕೆ ಮಾರಿಕೊಂಡರೆ ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಹುಟ್ಟುಕೊಳ್ಳುತ್ತಾರೆ. ಆದ್ದರಿಂದ ಜನ ಎಚ್ಚೆತ್ತುಕೊಳ್ಳಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ಈ‌‌ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಆ.3ರಂದು ದೊಡ್ಡಬಳ್ಳಾಪುರ ತಾಲೂಕು‌ ಕಚೇರಿ, ಹಾಸ್ಟೆಲ್ ಗಳು, ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳು ಇಲ್ಲದೆ ಇರುವುದು, ಹಾಸ್ಟೆಲ್ ಮಕ್ಕಳಿಗೆ ಬಿಸಿ‌ನೀರಿನ ವ್ಯವಸ್ಥೆ ಇಲ್ಲದೇ ಇರುವುದು‌‌ ಕಂಡುಬಂದಿತ್ತು. ಆದ್ದರಿಂದ ಇವುಗಳ ಮೇಲೆ ದೂರು ದಾಖಲು ದಾಖಲಿಸಿದ್ದೇವೆ. 20 ದಿನದೊಳಗಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ ಎಂದರು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

43 minutes ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

16 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

22 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago