ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣೆ ಫಲಿತಾಂಶ- ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ತೀವ್ರ ಗುದ್ದಾಟ ವಿಚಾರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾ.ಪ್ರ.ಕಾ ಹರೀಶ್ ಗೌಡ ತೀವ್ರ ವಾಗ್ದಾಳಿ….!

ದೊಡ್ಡಬಳ್ಳಾಪುರ: ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣಾ ಫಲಿತಾಂಶಕ್ಕೆ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ತೀವ್ರ ಗುದ್ದಾಟ ನಡೆದವು.

ಫಲಿತಾಂಶ ಹೊರ ಬಿಡಬಾರದು ಎಂದು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದರೆ. ಇಂದೇ ಫಲಿತಾಂಶ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಫಲಿತಾಂಶ ಪ್ರಕಟಿಸುವಂತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಪಟ್ಟು ಹಿಡಿದಿದ್ದರು.

ಬಿಜೆಪಿ ಕಾರ್ಯಕರ್ತರು ಸಂಘದ ಕಚೇರಿ ಮುಂದೆ ಕುಳಿತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ‌ನಡೆಸಿದ್ದರು. ಈ ಹಿನ್ನೆಲೆ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ….

‘ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘವನ್ನು ಉಳಿಸುವ ಸಲುವಾಗಿ ಚುನಾವಣೆ ನಡೆಸಬಾರದು ಎಂದು ಸಾಕಷ್ಟು ಪ್ರಯತ್ನ ಪಟ್ಟಿದ್ದೇವು. ಆದರೆ, ತಾಲೂಕಿನ ಹಾಲಿ ಶಾಸಕರ ದುರಾಹಂಕಾರದ ವರ್ತನೆ, ಎಲ್ಲಾ ಕಡೆ ನನ್ನದೆ ನಡೆಯಬೇಕು ಎಂಬ ಸರ್ವಾಧಿಕಾರತ್ವದ ಧೋರಣೆಯಿಂದಾಗಿ ಇಲ್ಲಿ ಚುನಾವಣೆ ನಡೆಯುವ ಹಾಗೇ ಆಗಿದೆ. ಈಗಾಗಲೇ ಈ ಸೊಸೈಟಿ 3 ಲಕ್ಷ ನಷ್ಟದಲ್ಲಿದೆ. ಟಿ.ವೆಂಕಟರಮಣಯ್ಯ ಶಾಸಕರಾಗಿದ್ದಾಗ ಹಾಗೂ ಚುಂಚೇಗೌಡರು ಬಿಡಿಸಿಸಿ ನಿರ್ದೇಶಕರಾಗಿದ್ದಾಗ ಮುಚ್ಚುವ ಹಂತದಲ್ಲಿದ್ದ ಸುಮಾರು 8‌ ಸೊಸೈಟಿಗಳ‌ನ್ನು ಪುನಃಶ್ಚೇತನಗೊಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಹಕಾರ ಇರಬೇಕು ಎಂಬ ಉದ್ದೇಶದಿಂದ ಒಮ್ಮತದಿಂದ ಮೂರು ಪಕ್ಷಗಳಿಗೂ ನಾಲ್ಕು ಸ್ಥಾನಗಳನ್ನು ನೀಡುವ ಅಭಿಪ್ರಾಯ ಇತ್ತು. ಆದರೆ, ಹಾಲಿ ಶಾಸಕರ ದುರಾಸೆ ಹಾಗೂ ದುರಾಡಳಿತದ ಪರಮಾವಧಿ ಕಾರಣದಿಂದ ಚುನಾವಣೆ ನಡೆಯುವ ಹಾಗೇ ಆಗಿದೆ‌. ತಾಲೂಕಿನಲ್ಲಿ ಹಿಟ್ಲರ್ ಆಡಳಿತ ನಡೆಸಲು ಇವರು ಬಂದಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ಸನ್ನಿವೇಶ ಬಂದಾಗ ಯಾವ ರೀತಿ ವಾತಾವರಣ ತಿಳಿಗೊಳಿಸಬೇಕು ಎಂಬ ಸಾಮಾನ್ಯ ಜ್ಞಾನವಿಲ್ಲ’ ಎಂದು ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಗುಡುಗಿದ್ದಾರೆ..

‘ಮೊನ್ನೆ ಏನೋ ಪ್ರೆಸ್ ಅಲ್ಲಿ ಮಾತಾಡಿದ್ದೀಯಲ್ಲಪ್ಪಾ… ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಂತಾ…ನಿನ್ನ ಯೋಗ್ಯತೆಗೆ ಒಂದು ಹೊಸ ಸೊಸೈಟಿ ತಗೋಬಾ..ಐದು ವರ್ಷದ ಅಧಿಕಾರಾವಧಿಯಲ್ಲಿ ಒಂದು ಹೊಸ ಸೊಸೈಟಿ ತಾಲೂಕಿಗೆ ತಂದುಕೊಡು…ಇವತ್ತು ರಾಮಾಯಣ ಕ್ರಿಯೇಟ್ ಮಾಡೊದಕ್ಕೆ ಬಂದಿದ್ದೀಯ ಅಲ್ವಾ.. ಇವತ್ತಿಂದ ಶುರುವಾಗತ್ತದೆ ನೋಡಿಕೊ… ನಮ್ಮ ಮಧುರೆ ಹೋಬಳಿಯಲ್ಲಿ ಹೇಗೆ ಆಟವಾಡುತ್ತಿಯಾ… ಇನ್ನು ಮುಂದೆ ಡೈರಿ ಚುನಾವಣೆಗೂ ನೀನು ಬಂದು ಕುತ್ಕೋಬೇಕು…. ಆ ರೀತಿಯ ಪರಿಸ್ಥಿತಿ ನೀನೇ ತಂದುಕೊಳ್ಳುತ್ತಿದ್ದೀಯಾ…ನೀನು ಜನಗಳಿಗೆ ನ್ಯಾಯ ಕೊಡಿಸುವುದು ಬೇಡ, ಶೋ ತೋರಿಸಬೇಕಷ್ಟೆ, ನೀನು ಶೋಗಷ್ಟೇ ನಮ್ಮ ತಾಲೂಕಿಗೆ ಬಂದಿರೋದು… ಯಾವೋ ಎರಡು ಪುಡಿಗಾಸು ಇಟ್ಟಿಕೊಂಡು ಬಂದಿದ್ದೀಯಾ..ಅದು ಎಷ್ಟು ದಿನ ನಡೀತದೋ ನಡೀಲಿ’ ಎಂದು ಕಿಡಿಕಾರಿದ್ದಾರೆ.

‘ಹೊಸ ವೋಟ್ ಗೆ ಅಧಿಕಾರ ಬಂದ ಮೇಲೆ ಬರೀ 185 ವೋಟ್ ಎಣಿಸಿ ಏನು ಪ್ರಯೋಜನ. ಅದರಲ್ಲೇನು ಉಪ್ಪು ಹುಳಿ ಖಾರ ಹಾಕೋದು. ಆಗಲಿ ಬಿಡಿ ಕೋರ್ಟ್ ಆದೇಶ ಬಂದ ಮೇಲೆ ಎಲ್ಲಾ ಬಂದೇ ಬರುತ್ತಲ್ಲಾ.. ಅಲ್ಲಿನವರೆಗೆ ತಾಳ್ಮೆಯಿಂದ ಇರೊದಕ್ಕೆ ಆಗಲ್ಲ ಇವರಿಗೆ. ಕೋರ್ಟ್ ಆದೇಶ ಬರುವವರೆಗೂ ಚುನಾವಣಾ ಅಧಿಕಾರಿಗಳು ಏನೂ ಮಾಡುವುದಕ್ಕೆ ಆಗುವುದಿಲ್ಲ. ಅಲ್ಲಿನವರೆಗೂ ಮತ ಪೆಟ್ಟಿಗೆ ಸ್ಟ್ರಾಂಗ್ ರೂಮಿನಲ್ಲಿರುತ್ತದೆ. ಏನು ಅಷ್ಟೋಂದು ಆತುರ ನಿಮಗೆ ಅದಕ್ಕೆ ಇಲ್ಲಿಗೆ ಬಂದು ನೀನು ಕುಳಿತಿದ್ದೀಯಾ…?‌ ಮೊದಲು ಇವೆಲ್ಲಾ ಬಿಟ್ಟು ಅಭಿವೃದ್ದಿ ಕಡೆ ಗಮನ ಕೊಡು ಅದಕ್ಕೆ ನಾವು ಸಹಕಾರ ಕೊಡುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ…

‘ನಮ್ಮ ಜೆಡಿಎಸ್ ಪಾರ್ಟಿಯನ್ನ ಒಡೆಯುವುದಕ್ಕೆ ಬಂದಿದ್ದೀಯಾ… ? ನಾವು ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿ ಈ ಸೊಸೈಟಿ ಚುನಾವಣೆ ಮಾಡಿರುವುದು. ನಾವು ಒಳ್ಳೆ ಕೆಲಸಗಳಿಗೆ ಯಾರು ಸಹಕಾರ ಕೊಡ್ತಾತರೋ ಅಂತವರ ಜೊತೆ ಕೈಜೋಡಿಸುವುದು ನಿಜ.‌ ನಿಮ್ಮ ಜೊತೆ ಯಾವುದೇ ಮುಲಾಜಿಗೆ ಒಳಗಾಗದೇ ಕೈ ಜೋಡಿಸುವುದಿಲ್ಲ. ನಿಮಗೆ ತಕ್ಕ ಪಾಠವನ್ನು ನಮ್ಮ ಜೆಡಿಎಸ್ ಕಾರ್ಯಕರ್ತರೇ ಕಲಿಸುತ್ತಾರೆ….ಮೊನ್ನೆ ನಗರಸಭೆಯಲ್ಲಿ ಆಡಿದ ಆಟವನ್ನು ಇಲ್ಲಿಯೂ ಆಡೋದಕ್ಕೆ ಬಂದಿದ್ದೀಯಾ…. ಇಲ್ಲೂ ಸಹ ನಮ್ಮ ಜೆಡಿಎಸ್ ಕಾರ್ಯಕರ್ತರನ್ನ ಒಡೆಯುವುದಕ್ಕೆ ಬಂದಿದ್ದೀಯಾ….ಇದನ್ನೇ ನೀನು ಮುಂದುವರಿಸಿದರೆ ‌ನಾವು ಬೇರೆ ರೀತಿನೇ ತೋರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ

ಈ ದುರಾಡಳಿತವನ್ನ ತಾಲೂಕಿನ ಜನತೆ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ…

ಕೇಂದ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಬಿಜೆಪಿ‌ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಒಟ್ಟೊಟ್ಟಿಗೆ ರಾಜಕಾರಣ ಮಾಡುತ್ತಿದ್ದಾರೆ… ಆದರೆ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾ.ಪ್ರ.ಕಾ ಹರೀಶ್ ಗೌಡರು ಮಾತ್ರ ರಾಜಕೀಯ‌ವಾಗಿ ಗುದ್ದಾಟ‌ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ…

Ramesh Babu

Journalist

Recent Posts

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

49 minutes ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

1 hour ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

13 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

15 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

15 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

19 hours ago