ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣೆ ಫಲಿತಾಂಶ- ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ತೀವ್ರ ಗುದ್ದಾಟ ವಿಚಾರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾ.ಪ್ರ.ಕಾ ಹರೀಶ್ ಗೌಡ ತೀವ್ರ ವಾಗ್ದಾಳಿ….!

ದೊಡ್ಡಬಳ್ಳಾಪುರ: ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣಾ ಫಲಿತಾಂಶಕ್ಕೆ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ತೀವ್ರ ಗುದ್ದಾಟ ನಡೆದವು.

ಫಲಿತಾಂಶ ಹೊರ ಬಿಡಬಾರದು ಎಂದು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದರೆ. ಇಂದೇ ಫಲಿತಾಂಶ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಫಲಿತಾಂಶ ಪ್ರಕಟಿಸುವಂತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಪಟ್ಟು ಹಿಡಿದಿದ್ದರು.

ಬಿಜೆಪಿ ಕಾರ್ಯಕರ್ತರು ಸಂಘದ ಕಚೇರಿ ಮುಂದೆ ಕುಳಿತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ‌ನಡೆಸಿದ್ದರು. ಈ ಹಿನ್ನೆಲೆ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ….

‘ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘವನ್ನು ಉಳಿಸುವ ಸಲುವಾಗಿ ಚುನಾವಣೆ ನಡೆಸಬಾರದು ಎಂದು ಸಾಕಷ್ಟು ಪ್ರಯತ್ನ ಪಟ್ಟಿದ್ದೇವು. ಆದರೆ, ತಾಲೂಕಿನ ಹಾಲಿ ಶಾಸಕರ ದುರಾಹಂಕಾರದ ವರ್ತನೆ, ಎಲ್ಲಾ ಕಡೆ ನನ್ನದೆ ನಡೆಯಬೇಕು ಎಂಬ ಸರ್ವಾಧಿಕಾರತ್ವದ ಧೋರಣೆಯಿಂದಾಗಿ ಇಲ್ಲಿ ಚುನಾವಣೆ ನಡೆಯುವ ಹಾಗೇ ಆಗಿದೆ. ಈಗಾಗಲೇ ಈ ಸೊಸೈಟಿ 3 ಲಕ್ಷ ನಷ್ಟದಲ್ಲಿದೆ. ಟಿ.ವೆಂಕಟರಮಣಯ್ಯ ಶಾಸಕರಾಗಿದ್ದಾಗ ಹಾಗೂ ಚುಂಚೇಗೌಡರು ಬಿಡಿಸಿಸಿ ನಿರ್ದೇಶಕರಾಗಿದ್ದಾಗ ಮುಚ್ಚುವ ಹಂತದಲ್ಲಿದ್ದ ಸುಮಾರು 8‌ ಸೊಸೈಟಿಗಳ‌ನ್ನು ಪುನಃಶ್ಚೇತನಗೊಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಹಕಾರ ಇರಬೇಕು ಎಂಬ ಉದ್ದೇಶದಿಂದ ಒಮ್ಮತದಿಂದ ಮೂರು ಪಕ್ಷಗಳಿಗೂ ನಾಲ್ಕು ಸ್ಥಾನಗಳನ್ನು ನೀಡುವ ಅಭಿಪ್ರಾಯ ಇತ್ತು. ಆದರೆ, ಹಾಲಿ ಶಾಸಕರ ದುರಾಸೆ ಹಾಗೂ ದುರಾಡಳಿತದ ಪರಮಾವಧಿ ಕಾರಣದಿಂದ ಚುನಾವಣೆ ನಡೆಯುವ ಹಾಗೇ ಆಗಿದೆ‌. ತಾಲೂಕಿನಲ್ಲಿ ಹಿಟ್ಲರ್ ಆಡಳಿತ ನಡೆಸಲು ಇವರು ಬಂದಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ಸನ್ನಿವೇಶ ಬಂದಾಗ ಯಾವ ರೀತಿ ವಾತಾವರಣ ತಿಳಿಗೊಳಿಸಬೇಕು ಎಂಬ ಸಾಮಾನ್ಯ ಜ್ಞಾನವಿಲ್ಲ’ ಎಂದು ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಗುಡುಗಿದ್ದಾರೆ..

‘ಮೊನ್ನೆ ಏನೋ ಪ್ರೆಸ್ ಅಲ್ಲಿ ಮಾತಾಡಿದ್ದೀಯಲ್ಲಪ್ಪಾ… ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಂತಾ…ನಿನ್ನ ಯೋಗ್ಯತೆಗೆ ಒಂದು ಹೊಸ ಸೊಸೈಟಿ ತಗೋಬಾ..ಐದು ವರ್ಷದ ಅಧಿಕಾರಾವಧಿಯಲ್ಲಿ ಒಂದು ಹೊಸ ಸೊಸೈಟಿ ತಾಲೂಕಿಗೆ ತಂದುಕೊಡು…ಇವತ್ತು ರಾಮಾಯಣ ಕ್ರಿಯೇಟ್ ಮಾಡೊದಕ್ಕೆ ಬಂದಿದ್ದೀಯ ಅಲ್ವಾ.. ಇವತ್ತಿಂದ ಶುರುವಾಗತ್ತದೆ ನೋಡಿಕೊ… ನಮ್ಮ ಮಧುರೆ ಹೋಬಳಿಯಲ್ಲಿ ಹೇಗೆ ಆಟವಾಡುತ್ತಿಯಾ… ಇನ್ನು ಮುಂದೆ ಡೈರಿ ಚುನಾವಣೆಗೂ ನೀನು ಬಂದು ಕುತ್ಕೋಬೇಕು…. ಆ ರೀತಿಯ ಪರಿಸ್ಥಿತಿ ನೀನೇ ತಂದುಕೊಳ್ಳುತ್ತಿದ್ದೀಯಾ…ನೀನು ಜನಗಳಿಗೆ ನ್ಯಾಯ ಕೊಡಿಸುವುದು ಬೇಡ, ಶೋ ತೋರಿಸಬೇಕಷ್ಟೆ, ನೀನು ಶೋಗಷ್ಟೇ ನಮ್ಮ ತಾಲೂಕಿಗೆ ಬಂದಿರೋದು… ಯಾವೋ ಎರಡು ಪುಡಿಗಾಸು ಇಟ್ಟಿಕೊಂಡು ಬಂದಿದ್ದೀಯಾ..ಅದು ಎಷ್ಟು ದಿನ ನಡೀತದೋ ನಡೀಲಿ’ ಎಂದು ಕಿಡಿಕಾರಿದ್ದಾರೆ.

‘ಹೊಸ ವೋಟ್ ಗೆ ಅಧಿಕಾರ ಬಂದ ಮೇಲೆ ಬರೀ 185 ವೋಟ್ ಎಣಿಸಿ ಏನು ಪ್ರಯೋಜನ. ಅದರಲ್ಲೇನು ಉಪ್ಪು ಹುಳಿ ಖಾರ ಹಾಕೋದು. ಆಗಲಿ ಬಿಡಿ ಕೋರ್ಟ್ ಆದೇಶ ಬಂದ ಮೇಲೆ ಎಲ್ಲಾ ಬಂದೇ ಬರುತ್ತಲ್ಲಾ.. ಅಲ್ಲಿನವರೆಗೆ ತಾಳ್ಮೆಯಿಂದ ಇರೊದಕ್ಕೆ ಆಗಲ್ಲ ಇವರಿಗೆ. ಕೋರ್ಟ್ ಆದೇಶ ಬರುವವರೆಗೂ ಚುನಾವಣಾ ಅಧಿಕಾರಿಗಳು ಏನೂ ಮಾಡುವುದಕ್ಕೆ ಆಗುವುದಿಲ್ಲ. ಅಲ್ಲಿನವರೆಗೂ ಮತ ಪೆಟ್ಟಿಗೆ ಸ್ಟ್ರಾಂಗ್ ರೂಮಿನಲ್ಲಿರುತ್ತದೆ. ಏನು ಅಷ್ಟೋಂದು ಆತುರ ನಿಮಗೆ ಅದಕ್ಕೆ ಇಲ್ಲಿಗೆ ಬಂದು ನೀನು ಕುಳಿತಿದ್ದೀಯಾ…?‌ ಮೊದಲು ಇವೆಲ್ಲಾ ಬಿಟ್ಟು ಅಭಿವೃದ್ದಿ ಕಡೆ ಗಮನ ಕೊಡು ಅದಕ್ಕೆ ನಾವು ಸಹಕಾರ ಕೊಡುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ…

‘ನಮ್ಮ ಜೆಡಿಎಸ್ ಪಾರ್ಟಿಯನ್ನ ಒಡೆಯುವುದಕ್ಕೆ ಬಂದಿದ್ದೀಯಾ… ? ನಾವು ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿ ಈ ಸೊಸೈಟಿ ಚುನಾವಣೆ ಮಾಡಿರುವುದು. ನಾವು ಒಳ್ಳೆ ಕೆಲಸಗಳಿಗೆ ಯಾರು ಸಹಕಾರ ಕೊಡ್ತಾತರೋ ಅಂತವರ ಜೊತೆ ಕೈಜೋಡಿಸುವುದು ನಿಜ.‌ ನಿಮ್ಮ ಜೊತೆ ಯಾವುದೇ ಮುಲಾಜಿಗೆ ಒಳಗಾಗದೇ ಕೈ ಜೋಡಿಸುವುದಿಲ್ಲ. ನಿಮಗೆ ತಕ್ಕ ಪಾಠವನ್ನು ನಮ್ಮ ಜೆಡಿಎಸ್ ಕಾರ್ಯಕರ್ತರೇ ಕಲಿಸುತ್ತಾರೆ….ಮೊನ್ನೆ ನಗರಸಭೆಯಲ್ಲಿ ಆಡಿದ ಆಟವನ್ನು ಇಲ್ಲಿಯೂ ಆಡೋದಕ್ಕೆ ಬಂದಿದ್ದೀಯಾ…. ಇಲ್ಲೂ ಸಹ ನಮ್ಮ ಜೆಡಿಎಸ್ ಕಾರ್ಯಕರ್ತರನ್ನ ಒಡೆಯುವುದಕ್ಕೆ ಬಂದಿದ್ದೀಯಾ….ಇದನ್ನೇ ನೀನು ಮುಂದುವರಿಸಿದರೆ ‌ನಾವು ಬೇರೆ ರೀತಿನೇ ತೋರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ

ಈ ದುರಾಡಳಿತವನ್ನ ತಾಲೂಕಿನ ಜನತೆ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ…

ಕೇಂದ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಬಿಜೆಪಿ‌ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಒಟ್ಟೊಟ್ಟಿಗೆ ರಾಜಕಾರಣ ಮಾಡುತ್ತಿದ್ದಾರೆ… ಆದರೆ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ರಾ.ಪ್ರ.ಕಾ ಹರೀಶ್ ಗೌಡರು ಮಾತ್ರ ರಾಜಕೀಯ‌ವಾಗಿ ಗುದ್ದಾಟ‌ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ…

Ramesh Babu

Journalist

Recent Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

12 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

12 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

13 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

15 hours ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

16 hours ago