ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ…

ಈ ವೇಳೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಿದ್ದಾರೆ…

2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗೆ ಮಂಜೂರಾಗಿರುವ ಹೊಸ ಯೋಜನೆಗಳು:

ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಕ್ ಡ್ಯಾಂಗಳ ನಿರ್ಮಾಣ, ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿಯಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ₹233 ಕೋಟಿ ವೆಚ್ಚದ ವರದಿ ಕೇಂದ್ರಕ್ಕೆ ಸಲ್ಲಿಕೆ.

ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಒಳಚರಂಡಿ ಅಭಿವೃದ್ದಿ. ದೊಡ್ಡಬಳ್ಳಾಪುರದಲ್ಲಿ ಪ್ಯಾರಮೆಡಿಕಲ್ ಕೋರ್ಸ್ ತರಗತಿಗಳ ಪ್ರಾರಂಭ. ದೊಡ್ಡಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭ.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ 2ನೇ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ₹650 ಕೋಟಿ ಮೀಸಲಿಡಲಾಗಿದೆ.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಗೆ ₹140 ಕೋಟಿ ಮೀಸಲಿಡಲಾಗಿದೆ.

Ramesh Babu

Journalist

Recent Posts

ನಿಗದಿಯಂತೆ ಭಾನುವಾರವೇ ಶ್ರೀರಾಮ ಶೋಭಾಯಾತ್ರೆ ಆಚರಣೆ

ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…

5 hours ago

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ವರ್ಗಾವಣೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…

7 hours ago

ಶ್ರೀರಾಮ ಶೋಭಾಯಾತ್ರೆ: ಡಿಜೆ ಅನುಮತಿಗಾಗಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…

7 hours ago

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

12 hours ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

17 hours ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

1 day ago