ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ…

ಈ ವೇಳೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಿದ್ದಾರೆ…

2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗೆ ಮಂಜೂರಾಗಿರುವ ಹೊಸ ಯೋಜನೆಗಳು:

ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಕ್ ಡ್ಯಾಂಗಳ ನಿರ್ಮಾಣ, ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿಯಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ₹233 ಕೋಟಿ ವೆಚ್ಚದ ವರದಿ ಕೇಂದ್ರಕ್ಕೆ ಸಲ್ಲಿಕೆ.

ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಒಳಚರಂಡಿ ಅಭಿವೃದ್ದಿ. ದೊಡ್ಡಬಳ್ಳಾಪುರದಲ್ಲಿ ಪ್ಯಾರಮೆಡಿಕಲ್ ಕೋರ್ಸ್ ತರಗತಿಗಳ ಪ್ರಾರಂಭ. ದೊಡ್ಡಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭ.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ 2ನೇ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ₹650 ಕೋಟಿ ಮೀಸಲಿಡಲಾಗಿದೆ.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಗೆ ₹140 ಕೋಟಿ ಮೀಸಲಿಡಲಾಗಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

5 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

19 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

19 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

19 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago