ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ…
ಈ ವೇಳೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಿದ್ದಾರೆ…
2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗೆ ಮಂಜೂರಾಗಿರುವ ಹೊಸ ಯೋಜನೆಗಳು:
ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಕ್ ಡ್ಯಾಂಗಳ ನಿರ್ಮಾಣ, ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿಯಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ₹233 ಕೋಟಿ ವೆಚ್ಚದ ವರದಿ ಕೇಂದ್ರಕ್ಕೆ ಸಲ್ಲಿಕೆ.
ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಒಳಚರಂಡಿ ಅಭಿವೃದ್ದಿ. ದೊಡ್ಡಬಳ್ಳಾಪುರದಲ್ಲಿ ಪ್ಯಾರಮೆಡಿಕಲ್ ಕೋರ್ಸ್ ತರಗತಿಗಳ ಪ್ರಾರಂಭ. ದೊಡ್ಡಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭ.
ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ 2ನೇ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ₹650 ಕೋಟಿ ಮೀಸಲಿಡಲಾಗಿದೆ.
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಗೆ ₹140 ಕೋಟಿ ಮೀಸಲಿಡಲಾಗಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…