ದೊಡ್ಡಬಳ್ಳಾಪುರಕ್ಕೆ ಸಿಎಂ‌ ಸಿದ್ದರಾಮಯ್ಯ ಆಗಮನ

ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಭಾಗಿಯಾಗಲು ದೊಡ್ಡಬಳ್ಳಾಪುರಕ್ಕೆ ಸಿಎಂ‌ ಸಿದ್ದರಾಮಯ್ಯ ಆಗಮಿಸಿದ್ದಾರೆ..

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇಂದು ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ‌. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.

ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ. ಪ್ರೊ.ರವಿಕಿರಣ್‌ ಕೆ.ಆರ್ ಅವರು ಬರೆದಿರುವ “ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ” ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ..

Leave a Reply

Your email address will not be published. Required fields are marked *

error: Content is protected !!