ದೊಡ್ಡಬಳ್ಳಾಪುರ:ಡಿಸೆಂಬರ್ 19 ರಂದು ಸಿರಿಧಾನ್ಯ ಪಾಕ ಸ್ಪರ್ಧೆ

ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣ, ದೊಡ್ಡಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ.

ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಭಾಗವಹಿಸಬಹುದು ಸಿರಿಧಾನ್ಯ ಸಸ್ಯಾಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಪ್ರತಿ ಸ್ಪರ್ಧಿ ಒಂದು ತಿನಿಸು (ಸಿಹಿ ಅಥವಾ ಖಾರ) ತಯಾರಿಸಲು ಮಾತ್ರ ಅವಕಾಶವಿದೆ. ಆಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ ಬೇಕಾಗುವ ಸಾಮಗ್ರಿಗಳು ಹಾಗೂ ತಯಾರಿಸುವ ವಿಧಾನ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 18 ರೊಳಗೆ ಸಂಬಂಧಪಟ್ಟ ತಾಲ್ಲೂಕಿನ ಇ-ಮೇಲ್ ಗೆ ಕಳುಹಿಸಬೇಕು.

ಇ-ಮೇಲ್ ವಿಳಾಸ adadevanahalli@gmail.com (ದೇವನಹಳ್ಳಿ), adaagridbp@yahoo.in (ದೊಡ್ಡಬಳ್ಳಾಪುರ), ada10hoskote@gmail.com (ಹೊಸಕೋಟೆ), adanelamangala@gmail.com (ನೆಲಮಂಗಲ). ಜಿಲ್ಲಾ ಮಟ್ಟದ ಪ್ರಥಮ ಸ್ಥಾನಕ್ಕೆ ಸಿಹಿ ತಿನಿಸು ಅಥವಾ ಖಾರ ತಿನಿಸುಗಳಿಗೆ ತಲಾ ರೂ.5000/- ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿಸೆಂಬರ್ 23 ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಬದ್ಧರಾಗಿರಬೇಕು.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮೊಬೈಲ್ ಸಂಖ್ಯೆ 8277929923 ಕ್ಕೆ ಸಂಪರ್ಕಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago