ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣ, ದೊಡ್ಡಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ.
ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಭಾಗವಹಿಸಬಹುದು ಸಿರಿಧಾನ್ಯ ಸಸ್ಯಾಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಪ್ರತಿ ಸ್ಪರ್ಧಿ ಒಂದು ತಿನಿಸು (ಸಿಹಿ ಅಥವಾ ಖಾರ) ತಯಾರಿಸಲು ಮಾತ್ರ ಅವಕಾಶವಿದೆ. ಆಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ ಬೇಕಾಗುವ ಸಾಮಗ್ರಿಗಳು ಹಾಗೂ ತಯಾರಿಸುವ ವಿಧಾನ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 18 ರೊಳಗೆ ಸಂಬಂಧಪಟ್ಟ ತಾಲ್ಲೂಕಿನ ಇ-ಮೇಲ್ ಗೆ ಕಳುಹಿಸಬೇಕು.
ಇ-ಮೇಲ್ ವಿಳಾಸ adadevanahalli@gmail.com (ದೇವನಹಳ್ಳಿ), adaagridbp@yahoo.in (ದೊಡ್ಡಬಳ್ಳಾಪುರ), ada10hoskote@gmail.com (ಹೊಸಕೋಟೆ), adanelamangala@gmail.com (ನೆಲಮಂಗಲ). ಜಿಲ್ಲಾ ಮಟ್ಟದ ಪ್ರಥಮ ಸ್ಥಾನಕ್ಕೆ ಸಿಹಿ ತಿನಿಸು ಅಥವಾ ಖಾರ ತಿನಿಸುಗಳಿಗೆ ತಲಾ ರೂ.5000/- ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿಸೆಂಬರ್ 23 ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಬದ್ಧರಾಗಿರಬೇಕು.
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮೊಬೈಲ್ ಸಂಖ್ಯೆ 8277929923 ಕ್ಕೆ ಸಂಪರ್ಕಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…