ರಾಜ್ಯ ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿ ಬಳಿಕ ತಾಲ್ಲೂಕಿನಾದ್ಯಂತ ಮಹಿಳಾ ಪ್ರಯಾಣಿಕರು ಸೇರಿದಂತೆ ಸಾರ್ವಜನಿಕರ ಪ್ರಯಾಣಿಕರ ಸಂಖ್ಯೆ ಶೇ.32 ರಷ್ಟು ಏರಿಕೆಯಾಗಿದೆ. ದೊಡ್ಡಬಳ್ಳಾಪುರದಿಂದ ಬೆಂಗಳೂರು, ನೆಲಮಂಗಲ, ತುಮಕೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ಕೋಲಾರ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾಗಿ ವೃದ್ಧಿಯಾಗಿದ್ದು. ಕೆಎಸ್ಆರ್.ಟಿಸಿ ನಿಗಮಕ್ಕೆ ಆಶಾದಾಯಕವಾಗಿದ್ದರೆ ಪ್ರಯಾಣಿಕರಿಗೆ ಮಾತ್ರ ನಿತ್ಯ ಪಿಕಲಾಟವಾಗಿದೆ. ಬಸ್ ಗಳ ಸಮಸ್ಯೆ ಇಲ್ಲದಿದ್ದರೂ ಬಸ್ ಗಳ ಸಾರಥಿಗಳಾದ ಚಾಲಕ, ನಿರ್ವಾಹಕರು ಸೇರಿದಂತೆ ಬಸ್ ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೊರತೆಯಿಂದ ನಿತ್ಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
2018 ರಿಂದ ಆಗಿಲ್ಲ ಸಿಬ್ಬಂದಿ ನೇಮಕಾತಿ:
ದೊಡ್ಡಬಳ್ಳಾಪುರ ಘಟಕಕ್ಕೆ 2018 ರಿಂದಲೂ ಈವರೆಗೆ ವಿವಿಧ ಕಾರಣಗಳಿಂದಾಗಿ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿ, ಡಿ.ಗ್ರೂಪ್ ಸಿಬ್ಬಂದಿ ಸೇರಿದಂತೆ ಆಯಾ ಕಟ್ಟಿನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಕಳೆದ ಐದಾರು ವರ್ಷಗಳಿಂದ ನಿವೃತ್ತಿ ಹೊಂದಿದ ಸಿಬ್ಬಂದಿ ಸಂಖ್ಯೆಯೂ ಅಧಿಕವಾಗಿದ್ದು ಅವರಿಂದ ತೆರವಾದ ಸ್ಥಾನಗಳಿಗೆ ಭರ್ತಿಯಾಗದೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಸಮರ್ಪಕವಾಗಿ ಬಸ್ ಗಳು ಇದ್ದರೂ ಚಾಲಕ, ನಿರ್ವಾಹಕ, ಸಿಬ್ಬಂದಿ ಕೊರತೆಯಿಂದಾಗಿ ಬಸ್ ಗಳು ರಸ್ತೆಗಿಳಿಯದಂತಾಗಿದೆ. ಪ್ರಯಾಣಿಕರು ಪ್ರತಿನಿತ್ಯ ಪರದಾಡುವಂತಾಗಿದೆ.
76 ರೂಟ್ 87 ಬಸ್ ಗಳು:
ತಾಲ್ಲೂಕಿನ ಗ್ರಾಮಾಂತರ ಭಾಗದಲ್ಲಿಯೂ ಯಾವುದೇ ಬಸ್ ಗಳ ಸಮಸ್ಯೆ ಇಲ್ಲ. ಹಾಲಿ ಇರುವ 76 ಮಾರ್ಗಗಳಿಗೆ 86 ಬಸ್ ಗಳಿವೆ ಆದರೆ ಉಳಿದ 11 ಬಸ್ ಗಳಿಗೆ ಚಾಲಕ, ನಿರ್ವಾಹಕರಿಲ್ಲ. ಮಳೆಗಾಲವಾದ್ದರಿಂದ ಪಿಕಪ್ ಮತ್ತು ಡ್ರಾಪ್ ಸಮಯದಲ್ಲಿ ವ್ಯತ್ಯಾಸವಾಗುತ್ತಿದೆ. ಗ್ರಾಮಾಂತರದಲ್ಲಿ ರಸ್ತೆಗಳಲ್ಲಿ ಜಾರುವಿಕೆ, ಕಿರಿದಾದ ರಸ್ತೆ, ಡಾಂಬರೀಕರಣ ಇಲ್ಲದ ಭಾಗಗಳಲ್ಲಿ ನಿಧಾನಗತಿಯಲ್ಲಿ ಚಾಲನೆ ಮಾಡುವಂತೆ ಘಟಕದಿಂದಲೇ ಸೂಚನೆ ನೀಡಿದ್ದೇವೆ. ರಸ್ತೆಗಳು ಸರಿಇಲ್ಲದ ಭಾಗದಲ್ಲಿ ಸಮಯ ಪಾಲನೆ ಆಗುತ್ತಿಲ್ಲ. ಇತರೆಡೆ ಸರಿಯಾದ ಸಮಯಕ್ಕೆ ಬಸ್ ಗಳು ಸಂಚಾರ ಮಾಡುತ್ತಿವೆ.
ಗುತ್ತಿಗೆ ಆಧಾರದಲ್ಲಿ 25 ರಿಂದ 30 ಜನ ಸಿಬ್ಬಂದಿ ನೇಮಕ:
ಸದ್ಯಕ್ಕೆ ಡ್ರೈವರ್ ಮತ್ತು ಚಾಲಕರ ಸಂಖ್ಯೆ ತೀವ್ರವಾಗಿ ಕಾಡುತ್ತಿರುವುದರಿಂದ ಕೇಂದ್ರ ನಿಗಮದ ನಿರ್ದೇಶನದಂತೆ 25 ರಿಂದ 30 ಜನ ಚಾಲಕ, ನಿರ್ವಾಹಕರನ್ನ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಪ್ರಕ್ರಿಯೆ ಆರಂಭ ಮಾಡಲಾಗುವುದು. ಉಳಿದ ತಾಂತ್ರಿಕ ಸಿಬ್ಬಂದಿಯ ಭರ್ತಿ ಕೆಲಸವು ಶೀಘ್ರವಾಗಿ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ ತಿಳಿಸಿದ್ದಾರೆ.
ಪ್ರತಿನಿತ್ಯ ಬೆಂಗಳೂರು ಪ್ರಯಾಣ ಮಾಡುವ ಸಾರ್ವಜನಿಕರನ್ನು ಕಾಡುತ್ತಿರುವ ಬಸ್ ಸಮಸ್ಯೆ ನಿಗಿಸಲು ಕ್ರಮ ವಹಿಸಲಾಗಿದ್ದು, ಬೆಳಗ್ಗೆ 5 ಗಂಟೆಯಿಂದ 6:30 ರವರೆಗೆ ಪ್ರತಿ ಅರ್ಧಗಂಟೆಗೊಂದು ಬಸ್, 6:30ರಿಂದ 10ಗಂಟೆವರೆಗೆ ಪ್ರತಿ 10 ರಿಂದ 15 ನಿಮಿಷಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದ್ದು ಬಳಿಕ ಗಂಟೆಗೊಮ್ಮೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರ ಸಂಖ್ಯೆ ಆಧಾರಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…