ದೊಡ್ಡಬಳ್ಳಾಪುರದಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ: ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದ ನಟ

ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಕೆಲಕಾಲ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದಲ್ಲಿ ಭಾಗವಹಿಸಿ, ದೊಡ್ಡಬಳ್ಳಾಪುರದಲ್ಲಿರುವ ನನ್ನ ಸ್ನೇಹಿತರು, ಅಭಿಮಾನಿಗಳನ್ನು ಭೇಟಿಯಾಗಲು ಬಂದಿದ್ದೇನೆ.‌ ದೊಡ್ಡಬಳ್ಳಾಪುರಕ್ಕೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ಅಭಿಮಾನಿಗಳ ಪ್ರೀತಿಗೆ ಸಂತಸ ತಂದಿದೆ…ಎಂದು ತಿಳಿಸಿದರು.

ಯುಗ್ರಾಯುಧಮ್, ಪರಾಕ್ ಎರಡು ಸಿನಿಮಾಗಳು ನಡೆಯುತ್ತಿವೆ. ಪರಾಕ್ ಸಿನಿಮಾವನ್ನು ಹಾಲೇಶ್ ಕೋಗುಂಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ವಿಂಟೇಜ್ ಶೈಲಿಯ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಯುಗ್ರಾಯುಧಮ್ ಚಿತ್ರವು 135 ಎಕರೆ ಜಾಗದಲ್ಲಿ ಸೆಟ್ ಹಾಕಿ ನಿರ್ಮಿಸುತ್ತಿರುವ ದೊಡ್ಡ ಬಜೆಟ್‌ನ ಪಿರಿಯಾಡಿಕ್ ಆ್ಯಕ್ಷನ್ ಚಿತ್ರವಾಗಿದೆ ಎಂದರು…

ಆದಷ್ಟು ಬೇಗ ಯುಗ್ರಾಯುಧಮ್, ಪರಾಕ್ ಎರಡು ಚಿತ್ರಗಳನ್ನು ರಿಲೀಸ್ ಮಾಡಬೇಕೆಂದು ಇದ್ದೇವೆ. ಇದಕ್ಕೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು…

Ramesh Babu

Journalist

Recent Posts

ನಾನು KMF ಅಧ್ಯಕ್ಷ ಅಕಾಂಕ್ಷಿಯಲ್ಲ- ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್

ನಾನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ಅಧ್ಯಕ್ಷ ಸ್ಥಾನಕ್ಕೆ ಅಕಾಂಕ್ಷಿಯಲ್ಲ ಎಂದು ಬಮೂಲ್ ಅಧ್ಯಕ್ಷ ಡಿ.ಕೆ…

8 hours ago

ಮೆಣಸಿ ಗೇಟ್ ನಲ್ಲಿ ನಿಲ್ಲದ ಅಪಘಾತಗಳು: ಆ್ಯಕ್ಸಿಡೆಂಟ್ ಹಾಟ್‌ಸ್ಪಾಟ್‌ ಆದರು ಕ್ಯಾರೆ ಎನ್ನದ ಸಂಬಂಧಪಟ್ಟವರು

ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುತ್ತಲೇ ಇರುತ್ತವೆ... ವಾರಕ್ಕೆ ಮೂರ್ನಾಲ್ಕು ಅಪಘಾತಗಳು…

9 hours ago

ಕನಕಪುರ ಶ್ರೀನಿವಾಸ್ ವಿವಾದಾತ್ಮಕ ಮಾತಿಗೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಖಡಕ್ ರಿಯಾಕ್ಷನ್: ಕನಕಪುರ ಶ್ರೀನಿವಾಸ್ ಮಾತಾಡಿದ್ದು ತುಂಬಾ ತಪ್ಪು, ಮನಸ್ಸಿಗೆ ಬಹಳ ಬೇಜಾರ್ ಆಗ್ತಿದೆ…ನಾವು ಕ್ಷಮಿಸೋದೇ ಇಲ್ಲ ಎಂದ ಶ್ರೀಮುರುಳಿ

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್, ಧ್ರುವ…

15 hours ago

ಜೀವ ನುಂಗಿದ ಗಾಳಿಪಟ ಹಾರಿಸುವ ಮಾಂಜಾ ದಾರ…….

ನನ್ನ ಹಳೆಯ ದ್ವಿಚಕ್ರವಾಹನದಲ್ಲಿ ಹೆಲ್ಮೆಟ್ ಹಾಕಿಕೊಂಡೇ ಮಗಳನ್ನು ಕರೆತರಲು ಹೋಗುತ್ತಿದ್ದೆ. ಇನ್ನೇನು ಸ್ವಲ್ಪವೇ ದೂರದಲ್ಲಿತ್ತು ನಾನು ತಲುಪಬೇಕಾಗಿದ್ದ ಸ್ಥಳ. ಇದ್ದಕ್ಕಿದ್ದಂತೆ…

23 hours ago

ಸ್ವಾತಂತ್ರ್ಯಕ್ಕಾಗಿ ಆರ್.ಎಸ್.ಎಸ್ ಕೊಡುಗೆ ಶೂನ್ಯ ಇದ್ದರೆ ಬಹಿರಂಗ ಪಡಿಸಲಿ: ಎನ್.ಅಂಬರೀಷ್

ಕೋಲಾರ: ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಆರ್.ಎಸ್.ಎಸ್ ಸಂಘಟನೆಯ ೧೦ ಮಂದಿ ಹೆಸರನ್ನು ಫೆ.೧೭ ರಂದು ಬೆಂಗಳೂರಿನ ಫ್ರೀಡಂ…

1 day ago

ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ನೇಮಕ

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷದ…

1 day ago