ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಕೆಲಕಾಲ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದಲ್ಲಿ ಭಾಗವಹಿಸಿ, ದೊಡ್ಡಬಳ್ಳಾಪುರದಲ್ಲಿರುವ ನನ್ನ ಸ್ನೇಹಿತರು, ಅಭಿಮಾನಿಗಳನ್ನು ಭೇಟಿಯಾಗಲು ಬಂದಿದ್ದೇನೆ. ದೊಡ್ಡಬಳ್ಳಾಪುರಕ್ಕೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ಅಭಿಮಾನಿಗಳ ಪ್ರೀತಿಗೆ ಸಂತಸ ತಂದಿದೆ…ಎಂದು ತಿಳಿಸಿದರು.
ಯುಗ್ರಾಯುಧಮ್, ಪರಾಕ್ ಎರಡು ಸಿನಿಮಾಗಳು ನಡೆಯುತ್ತಿವೆ. ಪರಾಕ್ ಸಿನಿಮಾವನ್ನು ಹಾಲೇಶ್ ಕೋಗುಂಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ವಿಂಟೇಜ್ ಶೈಲಿಯ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಯುಗ್ರಾಯುಧಮ್ ಚಿತ್ರವು 135 ಎಕರೆ ಜಾಗದಲ್ಲಿ ಸೆಟ್ ಹಾಕಿ ನಿರ್ಮಿಸುತ್ತಿರುವ ದೊಡ್ಡ ಬಜೆಟ್ನ ಪಿರಿಯಾಡಿಕ್ ಆ್ಯಕ್ಷನ್ ಚಿತ್ರವಾಗಿದೆ ಎಂದರು…
ಆದಷ್ಟು ಬೇಗ ಯುಗ್ರಾಯುಧಮ್, ಪರಾಕ್ ಎರಡು ಚಿತ್ರಗಳನ್ನು ರಿಲೀಸ್ ಮಾಡಬೇಕೆಂದು ಇದ್ದೇವೆ. ಇದಕ್ಕೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…