ದೊಡ್ಡಬಳ್ಳಾಪುರದಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ: ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದ ನಟ

ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಕೆಲಕಾಲ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದಲ್ಲಿ ಭಾಗವಹಿಸಿ, ದೊಡ್ಡಬಳ್ಳಾಪುರದಲ್ಲಿರುವ ನನ್ನ ಸ್ನೇಹಿತರು, ಅಭಿಮಾನಿಗಳನ್ನು ಭೇಟಿಯಾಗಲು ಬಂದಿದ್ದೇನೆ.‌ ದೊಡ್ಡಬಳ್ಳಾಪುರಕ್ಕೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ಅಭಿಮಾನಿಗಳ ಪ್ರೀತಿಗೆ ಸಂತಸ ತಂದಿದೆ…ಎಂದು ತಿಳಿಸಿದರು.

ಯುಗ್ರಾಯುಧಮ್, ಪರಾಕ್ ಎರಡು ಸಿನಿಮಾಗಳು ನಡೆಯುತ್ತಿವೆ. ಪರಾಕ್ ಸಿನಿಮಾವನ್ನು ಹಾಲೇಶ್ ಕೋಗುಂಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ವಿಂಟೇಜ್ ಶೈಲಿಯ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಯುಗ್ರಾಯುಧಮ್ ಚಿತ್ರವು 135 ಎಕರೆ ಜಾಗದಲ್ಲಿ ಸೆಟ್ ಹಾಕಿ ನಿರ್ಮಿಸುತ್ತಿರುವ ದೊಡ್ಡ ಬಜೆಟ್‌ನ ಪಿರಿಯಾಡಿಕ್ ಆ್ಯಕ್ಷನ್ ಚಿತ್ರವಾಗಿದೆ ಎಂದರು…

ಆದಷ್ಟು ಬೇಗ ಯುಗ್ರಾಯುಧಮ್, ಪರಾಕ್ ಎರಡು ಚಿತ್ರಗಳನ್ನು ರಿಲೀಸ್ ಮಾಡಬೇಕೆಂದು ಇದ್ದೇವೆ. ಇದಕ್ಕೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು…

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago