ದೊಡ್ಡಬಳ್ಳಾಪುರದಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ: ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದ ನಟ

ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಕೆಲಕಾಲ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದಲ್ಲಿ ಭಾಗವಹಿಸಿ, ದೊಡ್ಡಬಳ್ಳಾಪುರದಲ್ಲಿರುವ ನನ್ನ ಸ್ನೇಹಿತರು, ಅಭಿಮಾನಿಗಳನ್ನು ಭೇಟಿಯಾಗಲು ಬಂದಿದ್ದೇನೆ.‌ ದೊಡ್ಡಬಳ್ಳಾಪುರಕ್ಕೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ಅಭಿಮಾನಿಗಳ ಪ್ರೀತಿಗೆ ಸಂತಸ ತಂದಿದೆ…ಎಂದು ತಿಳಿಸಿದರು.

ಯುಗ್ರಾಯುಧಮ್, ಪರಾಕ್ ಎರಡು ಸಿನಿಮಾಗಳು ನಡೆಯುತ್ತಿವೆ. ಪರಾಕ್ ಸಿನಿಮಾವನ್ನು ಹಾಲೇಶ್ ಕೋಗುಂಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ವಿಂಟೇಜ್ ಶೈಲಿಯ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಯುಗ್ರಾಯುಧಮ್ ಚಿತ್ರವು 135 ಎಕರೆ ಜಾಗದಲ್ಲಿ ಸೆಟ್ ಹಾಕಿ ನಿರ್ಮಿಸುತ್ತಿರುವ ದೊಡ್ಡ ಬಜೆಟ್‌ನ ಪಿರಿಯಾಡಿಕ್ ಆ್ಯಕ್ಷನ್ ಚಿತ್ರವಾಗಿದೆ ಎಂದರು…

ಆದಷ್ಟು ಬೇಗ ಯುಗ್ರಾಯುಧಮ್, ಪರಾಕ್ ಎರಡು ಚಿತ್ರಗಳನ್ನು ರಿಲೀಸ್ ಮಾಡಬೇಕೆಂದು ಇದ್ದೇವೆ. ಇದಕ್ಕೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು…

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

1 hour ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago