ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು ಕ್ರಮ ಕೈಗೊಳ್ಳಿ ಎಂದು ಸದನದಲ್ಲಿ ಮನವಿ ಮಾಡಿದ್ದಕ್ಕೆ ಸಚಿವರು ಸ್ಪಂದಿಸಿದ್ದು, ಶೀಘ್ರದಲ್ಲೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ…

ಸದನದಲ್ಲಿ ಚರ್ಚೆಯಾದ ವಿಷಯ

ಶಾಸಕ ಧೀರಜ್ ಮುನಿರಾಜ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಸತತವಾಗಿ 2023ರಿಂದ ಸರ್ಕಾರದ ಬಳಿ ಕೇಳುತ್ತಲೇ ಬಂದಿದ್ದೇವೆ.‌ ಸದ್ಯಕ್ಕೆ ಪೂರ್ಣ ಅನುದಾನ ಅಲ್ಲದಿದ್ದರೂ ಶೇ. 50ರಷ್ಟಾದರೂ ಅನುದಾನ ಕೊಟ್ಟು ಜಿಲ್ಲಾಸ್ಪತ್ರೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು..

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಶಾಸಕ ಧೀರಜ್ ಮುನಿರಾಜ್ ಅವರು ಸಾಕಷ್ಟು ಕೇಳುತ್ತಲೇ ಬಂದಿದ್ದಾರೆ… ಹಿಂದಿನ ಸರ್ಕಾರ ಇದ್ದಾಗ ಕೊನೆ ಘಟ್ಟದಲ್ಲಿ ಅನುಮೋದನೆ ನೀಡಿತ್ತು. ನಂತರ ನಮ್ಮ ಸರ್ಕಾರ ಬಂದಾಗ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕಾ ಅಥವಾ ಬೇಡವಾ ಅಂತಾ ತಡೆಹಿಡಿಯಲಾಗಿತ್ತು. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಸ್ಪತ್ರೆ ಜಿಲ್ಲೆಗೆ ಸಂಬಂಧಪಟ್ಟಿದ್ದು, ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ  ಆಗಬೇಕು ಎಂದು ಹೇಳಿದ್ದಾರೆ.. ಈಗಾಗಲೇ 20ಕೋಟಿ ವೆಚ್ಚದಲ್ಲಿ 50 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಕಾಮಗಾರಿ ಶುರುವಾಗಿದೆ… ಇನ್ನೂ ಅದಕ್ಕೆ ಪ್ರಥಮ ಹಂತದಲ್ಲಿ 100 ಹಾಸಿಗೆ ವ್ಯವಸ್ಥೆಗೆ ಅನುಮೋದನೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಗೆ 250 ಹಾಸಿಗೆ ವ್ಯವಸ್ಥೆ ಇರಬೇಕಾಗುತ್ತದೆ. ಬೇಡಿಕೆ ಅನುಸಾರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು…

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago