ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು ಕ್ರಮ ಕೈಗೊಳ್ಳಿ ಎಂದು ಸದನದಲ್ಲಿ ಮನವಿ ಮಾಡಿದ್ದಕ್ಕೆ ಸಚಿವರು ಸ್ಪಂದಿಸಿದ್ದು, ಶೀಘ್ರದಲ್ಲೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ…

ಸದನದಲ್ಲಿ ಚರ್ಚೆಯಾದ ವಿಷಯ

ಶಾಸಕ ಧೀರಜ್ ಮುನಿರಾಜ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಸತತವಾಗಿ 2023ರಿಂದ ಸರ್ಕಾರದ ಬಳಿ ಕೇಳುತ್ತಲೇ ಬಂದಿದ್ದೇವೆ.‌ ಸದ್ಯಕ್ಕೆ ಪೂರ್ಣ ಅನುದಾನ ಅಲ್ಲದಿದ್ದರೂ ಶೇ. 50ರಷ್ಟಾದರೂ ಅನುದಾನ ಕೊಟ್ಟು ಜಿಲ್ಲಾಸ್ಪತ್ರೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು..

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಶಾಸಕ ಧೀರಜ್ ಮುನಿರಾಜ್ ಅವರು ಸಾಕಷ್ಟು ಕೇಳುತ್ತಲೇ ಬಂದಿದ್ದಾರೆ… ಹಿಂದಿನ ಸರ್ಕಾರ ಇದ್ದಾಗ ಕೊನೆ ಘಟ್ಟದಲ್ಲಿ ಅನುಮೋದನೆ ನೀಡಿತ್ತು. ನಂತರ ನಮ್ಮ ಸರ್ಕಾರ ಬಂದಾಗ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕಾ ಅಥವಾ ಬೇಡವಾ ಅಂತಾ ತಡೆಹಿಡಿಯಲಾಗಿತ್ತು. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಸ್ಪತ್ರೆ ಜಿಲ್ಲೆಗೆ ಸಂಬಂಧಪಟ್ಟಿದ್ದು, ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ  ಆಗಬೇಕು ಎಂದು ಹೇಳಿದ್ದಾರೆ.. ಈಗಾಗಲೇ 20ಕೋಟಿ ವೆಚ್ಚದಲ್ಲಿ 50 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಕಾಮಗಾರಿ ಶುರುವಾಗಿದೆ… ಇನ್ನೂ ಅದಕ್ಕೆ ಪ್ರಥಮ ಹಂತದಲ್ಲಿ 100 ಹಾಸಿಗೆ ವ್ಯವಸ್ಥೆಗೆ ಅನುಮೋದನೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಗೆ 250 ಹಾಸಿಗೆ ವ್ಯವಸ್ಥೆ ಇರಬೇಕಾಗುತ್ತದೆ. ಬೇಡಿಕೆ ಅನುಸಾರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು…

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

32 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

7 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago