ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು ಕ್ರಮ ಕೈಗೊಳ್ಳಿ ಎಂದು ಸದನದಲ್ಲಿ ಮನವಿ ಮಾಡಿದ್ದಕ್ಕೆ ಸಚಿವರು ಸ್ಪಂದಿಸಿದ್ದು, ಶೀಘ್ರದಲ್ಲೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ…

ಸದನದಲ್ಲಿ ಚರ್ಚೆಯಾದ ವಿಷಯ

ಶಾಸಕ ಧೀರಜ್ ಮುನಿರಾಜ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಸತತವಾಗಿ 2023ರಿಂದ ಸರ್ಕಾರದ ಬಳಿ ಕೇಳುತ್ತಲೇ ಬಂದಿದ್ದೇವೆ.‌ ಸದ್ಯಕ್ಕೆ ಪೂರ್ಣ ಅನುದಾನ ಅಲ್ಲದಿದ್ದರೂ ಶೇ. 50ರಷ್ಟಾದರೂ ಅನುದಾನ ಕೊಟ್ಟು ಜಿಲ್ಲಾಸ್ಪತ್ರೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು..

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಶಾಸಕ ಧೀರಜ್ ಮುನಿರಾಜ್ ಅವರು ಸಾಕಷ್ಟು ಕೇಳುತ್ತಲೇ ಬಂದಿದ್ದಾರೆ… ಹಿಂದಿನ ಸರ್ಕಾರ ಇದ್ದಾಗ ಕೊನೆ ಘಟ್ಟದಲ್ಲಿ ಅನುಮೋದನೆ ನೀಡಿತ್ತು. ನಂತರ ನಮ್ಮ ಸರ್ಕಾರ ಬಂದಾಗ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕಾ ಅಥವಾ ಬೇಡವಾ ಅಂತಾ ತಡೆಹಿಡಿಯಲಾಗಿತ್ತು. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಸ್ಪತ್ರೆ ಜಿಲ್ಲೆಗೆ ಸಂಬಂಧಪಟ್ಟಿದ್ದು, ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ  ಆಗಬೇಕು ಎಂದು ಹೇಳಿದ್ದಾರೆ.. ಈಗಾಗಲೇ 20ಕೋಟಿ ವೆಚ್ಚದಲ್ಲಿ 50 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಕಾಮಗಾರಿ ಶುರುವಾಗಿದೆ… ಇನ್ನೂ ಅದಕ್ಕೆ ಪ್ರಥಮ ಹಂತದಲ್ಲಿ 100 ಹಾಸಿಗೆ ವ್ಯವಸ್ಥೆಗೆ ಅನುಮೋದನೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಗೆ 250 ಹಾಸಿಗೆ ವ್ಯವಸ್ಥೆ ಇರಬೇಕಾಗುತ್ತದೆ. ಬೇಡಿಕೆ ಅನುಸಾರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು…

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

6 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

6 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

11 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

18 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

18 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago