ದೊಡ್ಡಬಳ್ಳಾಪುರದಲ್ಲಿ ನಾಳೆ ನಾಡಗೀತೆಯ ಶತಮಾನದ ಸಂಭ್ರಮ: ಸಾವಿರ ಸ್ವರಗಳ ಸಂಗಮ


ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1 ರಂದು ಡಾ.ರಾಜ್ ಕುಮಾರ್ ಪ್ರತಿಮೆ ಮುಂಭಾಗ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರದ ವಿವಿಧ ಶಾಲೆಗಳ ಸಾವಿರ ವಿದ್ಯಾರ್ಥಿಗಳು ನಾಡಗೀತೆ ಹಾಡುವ ಮೂಲಕ ಆಚರಿಸಲಿದ್ದಾರೆ.

ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು. ಶಾಲೆಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ಪ್ರತಿದಿನ ಹಾಡಬೇಕು ಮತ್ತು ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಹ ಹಾಡಬೇಕು ಎಂದು ಅದು ನಿರ್ದೇಶಿಸಿತು. ರಾಜ್ಯಕ್ಕೆ ಗೌರವ ಸಲ್ಲಿಸುವ ಸಂಕೇತವಾಗಿ ಹಾಡನ್ನು ಪ್ರದರ್ಶಿಸುವ ಸಮಯದಲ್ಲಿ ಹಾಜರಿದ್ದವರು ಎದ್ದು ನಿಲ್ಲಬೇಕು ಎಂಬ ಮೂಲಕ ಗೌರವ ಸಲ್ಲಿಸಲಾಗಿದೆ.

ಕುವೆಂಪು ಅವರು ರಚಿಸಿರುವ ಇಂದು  ನಾಡಗೀತೆಗಿರುವ ಕವಿತೆಯನ್ನು  ಗಾಯಕ ಮೈಸೂರು ಅನಂತಸ್ವಾಮಿ 1960ರ ದಶಕದಲ್ಲಿ ಇದಕ್ಕೆ ಒಂದು ರಾಗವನ್ನು ನೀಡಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕುವೆಂಪು ಅವರ ಸಮ್ಮುಖದಲ್ಲಿ ಅನಂತಸ್ವಾಮಿ ಕೂಡ ಇದನ್ನು ಹಾಡಿದ್ದರು. ಕರ್ನಾಟಕವನ್ನು ಭಾರತಮಾತೆಯ ಮಗಳು ಎಂದು ಬಣ್ಣಿಸುತ್ತದೆ.

ಈ ಗೀತೆಯು ಕರ್ನಾಟಕದ ಇತಿಹಾಸ, ಸಂಸ್ಕೃತಿ, ಭಾಷೆ ಮತ್ತು ವೈವಿಧ್ಯಮಯ ಜನಸಮುದಾಯಗಳ ಶಾಂತಿಯುತ ಸಹಬಾಳ್ವೆಯನ್ನು ಕೊಂಡಾಡುತ್ತದೆ. ಇದು ಕನ್ನಡಿಗರಲ್ಲಿ ಅಭಿಮಾನ ಮತ್ತು ಸ್ಫೂರ್ತಿಯನ್ನು ತುಂಬುವ ಮೂಲಕ ನಾಡಿನ ಘನತೆಯನ್ನು ಸಾರುತ್ತದೆ.

ಕರ್ನಾಟಕದ ಹೆಗ್ಗಳಿಕೆ:  ಕರ್ನಾಟಕವು ಭಾರತಮಾತೆಯ ಮಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ ಇತರ ರಾಜ್ಯಗಳೊಂದಿಗೆ ಶಾಂತಿಯುತ ಸಹಬಾಳ್ವೆ ನಡೆಸುವ, ಅದೇ ಸಮಯದಲ್ಲಿ ಆತ್ಮವಿಶ್ವಾಸ ಮತ್ತು ಶಕ್ತಿಯಿಂದ ತನ್ನ ಸ್ವಾಭಿಮಾನವನ್ನು ಕಾಪಾಡಿಕೊಳ್ಳುವ ಗತವೈಭವದ ನಾಡು ಇದಾಗಿದೆ.

ಇತಿಹಾಸ ಮತ್ತು ಪರಂಪರೆ:  ಕಾವೇರಿ, ತುಂಗಾ, ಶರಾವತಿ ಮುಂತಾದ ನದಿಗಳ ನಾಡಾಗಿ, ಡಂಕಣ ಮತ್ತು ಜಕ್ಕಣರಂತಹ ಶಿಲ್ಪಿಗಳ ತವರಾಗಿ, ಹಾಗೂ ತೈಲಪ ಮತ್ತು ಹೊಯ್ಸಳರಂತಹ ರಾಜಮನೆತನಗಳನ್ನು ಆಳಿದ ನಾಡಾಗಿ ಕರ್ನಾಟಕದ ಶ್ರೀಮಂತ ಇತಿಹಾಸವನ್ನು ಈ ಗೀತೆ ನೆನಪಿಸುತ್ತದೆ.

ಸಂಸ್ಕೃತಿ ಮತ್ತು ವೈವಿಧ್ಯತೆ:  ಇದು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಪಾರ್ಸಿ ಮತ್ತು ಜೈನರು ಸೇರಿದಂತೆ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತವೆ.
ಭಾಷೆ ಮತ್ತು ಸಾಹಿತ್ಯ:  ಕನ್ನಡ ನುಡಿ ಕುಣಿದಾಡುವ ಗೇಹವಾಗಿದ್ದು, ಕನ್ನಡಿಗರ ಹೃದಯದ ಮನೆ ಎನಿಸಿದೆ. ಕನ್ನಡವನ್ನು ಪ್ರೀತಿಸುವ ಮತ್ತು ಆರಾಧಿಸುವ ಜನರನ್ನು ಇದು ಒಳಗೊಂಡಿದೆ.

ವಿವಿಧ ಕ್ಷೇತ್ರಗಳ ಕೊಡುಗೆ:  ಇದು ಗಾಯಕರು, ವೈಣಿಕರು, ರಸಋಷಿಗಳು ಮತ್ತು ತತ್ವಜ್ಞಾನಿಗಳಿಗೆ ಜನ್ಮ ನೀಡಿದ ನಾಡಾಗಿದೆ. ವಿವೇಕಾನಂದರಂತಹ ಮಹಾಪುರುಷರಿಗೆ ತವರಾಗಿರುವುದು ಗೀತೆಯ ಮತ್ತೊಂದು ಅಂಶವಾಗಿದೆ.

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

2 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

7 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

14 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

24 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago